ಸಚಿವ ಈಶ್ವರ ಖಂಡ್ರೆ 
ರಾಜ್ಯ

2015ರ ನಂತರ ನಡೆದಿರುವ ಎಲ್ಲಾ ಅತಿಕ್ರಮಣಗಳು ಶೀಘ್ರವೇ ತೆರವು: ಸಚಿವ ಈಶ್ವರ ಖಂಡ್ರೆ

ವಾರಾಂತ್ಯದಲ್ಲಿ ಸಾವಿರಾರು ಜನರು ಟ್ರೆಕ್ಕಿಂಗ್ ಮತ್ತು ಇತರ ಚಟುವಟಿಕೆಗಳಿಗಾಗಿ ಈ ಸ್ಥಳಗಳಿಗೆ ಭೇಟಿ ನೀಡುತ್ತಾರೆ, ಇದು ಅನಾಹುತಗಳನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು

ಬೆಂಗಳೂರು: ವಯನಾಡು ಮತ್ತು ಶಿರೂರು ಭೂಕುಸಿತದ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು 2015 ರ ನಂತರ ಆಗಿರುವ ಎಲ್ಲಾ ಅತಿಕ್ರಮಣಗಳನ್ನು ತಕ್ಷಣವೇ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳವಂತೆ ಜಿಲ್ಲಾಡಳಿತ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಶುಕ್ರವಾರ ನಿರ್ದೇಶನ ನೀಡಿದ್ದಾರೆ. ಒಂದು ತಿಂಗಳೊಳಗೆ ವರದಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಹಾಸನ ಸೇರಿದಂತೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕಾಫಿ ಎಸ್ಟೇಟ್‌ಗಳು ಮತ್ತು ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಖಂಡ್ರೆ ಗಮನ ಸೆಳೆದಿದ್ದಾರೆ.

ವಾರಾಂತ್ಯದಲ್ಲಿ ಸಾವಿರಾರು ಜನರು ಟ್ರೆಕ್ಕಿಂಗ್ ಮತ್ತು ಇತರ ಚಟುವಟಿಕೆಗಳಿಗಾಗಿ ಈ ಸ್ಥಳಗಳಿಗೆ ಭೇಟಿ ನೀಡುತ್ತಾರೆ, ಇದು ಅನಾಹುತಗಳನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು. ಕಾಫಿ ತೋಟಗಳು, ಹೋಂ ಸ್ಟೇಗಳು, ರೆಸಾರ್ಟ್‌ಗಳು ಮತ್ತು ರಸ್ತೆಗಳಿಗೆ ದಾರಿ ಮಾಡಿಕೊಡಲು ಮರಗಳನ್ನು ಕಡಿಯುವುದು ಮತ್ತು ಸಸ್ಯಗಳನ್ನು ನಾಶಪಡಿಸುವುದರಿಂದ ಇಂತಹ ದುರಂತಗಳು ಮರುಕಳಿಸುತ್ತಿವೆ ಎಂಬ ತಜ್ಞರ ಅಭಿಪ್ರಾಯವನ್ನು ಖಂಡ್ರೆ ಅವರು ಒಪ್ಪಿಕೊಂಡರು.

ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು. ಈ ಮಧ್ಯೆ, ಪ್ರವಾಸೋದ್ಯಮವನ್ನು ನಿರ್ಬಂಧಿಸಲು ಸರ್ಕಾರವು ಕೇರಳ ಸರ್ಕಾರದ ಮಾದರಿಗಳನ್ನು ಅನಸುಸರಿಸುತ್ತದೆ .ರಾಜ್ಯದ ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿಯೂ ಪ್ರವಾಸೋದ್ಯಮವನ್ನು ನಿಯಂತ್ರಿಸುವ ಅಗತ್ಯವಿದೆ . ಈ ಎರಡು ಘಟನೆಗಳು ಎಚ್ಚರಿಕೆಯ ಗಂಟೆಯಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ ಎಂದು ಕರ್ನಾಟಕದ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಾರಾಂತ್ಯದಲ್ಲಿ, ವಿಶೇಷವಾಗಿ ಮಾನ್ಸೂನ್ ಪ್ರವಾಸೋದ್ಯಮ, ಜಲಪಾತ ಪ್ರವಾಸೋದ್ಯಮ ಮತ್ತು ರಜಾದಿನಗಳಿಗಾಗಿ ಹಲವಾರು ಜನರು ಮಲೆನಾಡು ಪ್ರದೇಶಕ್ಕೆ ಧಾವಿಸುತ್ತಾರೆ. ಈ ಸಮಯದಲ್ಲಿ ರೆಸಾರ್ಟ್‌ಗಳು ಮತ್ತು ಹೋಮ್ ಸ್ಟೇಗಳು ತುಂಬಿರುತ್ತವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪ್ರವಾಸೋದ್ಯಮವನ್ನು ನಿಯಂತ್ರಿಸುವ ಅವಶ್ಯಕತೆಯಿದೆ ಎಂದು ಪ್ರವಾಸೋದ್ಯಮ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT