ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ನಮ್ಮ ಮೆಟ್ರೋ ಹಳಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಸಂಜೆ 5.41ರ ಸುಮಾರಿಗೆ 57 ವರ್ಷದ ನವೀನ್ ಕುಮಾರ್ ಅರೋರ ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಂಜೆ 5.45ರ ಸುಮಾರಿಗೆ ಈ ಘಟನೆ ನಡೆದಿದ್ದು, ರಾತ್ರಿ 7.30ರವರೆಗೂ ಮೃತರ ದೇಹವು ಹಳಿಗಳ ಮೇಲೆ ಬಿದ್ದಿತ್ತು ಎಂದು ಬಿಎಂಆರ್‌ಸಿಎಲ್‌ನ ಮೂಲಗಳು ತಿಳಿಸಿವೆ. ಪೊಲೀಸರು ಮತ್ತು ಇತರ ಫೊರೆನ್ಸಿಕ್ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಯನ್ನು ಪುನರಾರಂಭಿಸಲು ಸಂಪೂರ್ಣ ಅನುಮತಿ ನೀಡುವುದನ್ನು ಅವರು ಕಾಯುತ್ತಿದ್ದರು. ಹೀಗಾಗಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

ನಮ್ಮ ಮೆಟ್ರೋ ಹಳಿಯಲ್ಲಿ ಈ ವರ್ಷ ಸಂಭವಿಸಿದ ಎರಡನೇ ಘಟನೆ ಇದಾಗಿದೆ. ಎರಡು ದಿನಗಳ ಹಿಂದೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗು ಆಕಸ್ಮಿಕವಾಗಿ ಮೆಟ್ರೋ ಹಳಿ ಮೇಲೆ ಬಿದ್ದಿತ್ತು. ನಂತರ ಎಚ್ಚೆತ್ತ ಮೆಟ್ರೋ ಸಿಬ್ಬಂದಿ ಎಎಚ್‌ಡಿ ಹಳಿಗಳ ತುರ್ತು ಟ್ರಿಪ್ ಸಿಸ್ಟಮ್ ವಿದ್ಯುತ್ ಲೈನ್ ಅನ್ನು ಸ್ವಿಚ್ ಆಫ್ ಮಾಡಿ ಮಗುವನ್ನು ರಕ್ಷಿಸಿದರು.

ಇದಕ್ಕೂ ಮುನ್ನ ಮಾರ್ಚ್ 22ರಂದು, ಮುಂಬೈ ಮೂಲದ ಧ್ರುವ ಜತಿನ್ ಠಕ್ಕರ್ ಎಂದು ಗುರುತಿಸಲಾದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದ 19 ವರ್ಷದ ಕಾನೂನು ವಿದ್ಯಾರ್ಥಿ, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಹೊರಡಲು ಸಿದ್ಧವಾಗಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದನು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT