ಮೇಘಶ್ರೀ  
ರಾಜ್ಯ

ವಯನಾಡು ಭೂ ಕುಸಿತ: ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ವಹಿಸಿರುವ ಜಿಲ್ಲಾಧಿಕಾರಿ ಮೇಘಶ್ರೀ ಅಪ್ಪಟ ಕನ್ನಡತಿ!

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಮೇಘಶ್ರೀ, ಭೂಕುಸಿತಕ್ಕೆ ಬಲಿಯಾದವರ ಶವಗಳನ್ನು ವಯನಾಡ್ ಸ್ಮಶಾನದಲ್ಲಿ ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡುವಾಗಲೂ ಅಲ್ಲಿದ್ದರು.

ಚಿತ್ರದುರ್ಗ: ಭೂ ಕುಸಿತದಿಂದ ತತ್ತರಗೊಂಡಿರುವ ವಯನಾಡ್ ನಲ್ಲಿ ಜಿಲ್ಲಾಧಿಕಾರಿ ಮೇಘಶ್ರೀ ಡಿ.ಆರ್ ದುರಂತ ಸಂಭವಿಸಿದ ದಿನದಿಂದಲೂ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಕಾರ್ಯಾಚರಣೆಯ ಸಂಪೂರ್ಣ ಉಸ್ತುವಾರಿ ವಹಿಸಿರುವ ಮೇಘಶ್ರೀ ಕರ್ನಾಟಕದವರು. ಮೇಘಶ್ರೀ ಡಿಆರ್ ಅವರು ಬೆಳಿಗ್ಗೆ 6 ಗಂಟೆಗೆ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ ಮತ್ತು ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಸೇವೆ ಸಲ್ಲಿಸಲು ಮುಂಜಾನೆ 3 ಗಂಟೆಯವರೆಗೆ ದಣಿವರಿಯದೆ ಕೆಲಸ ಮಾಡುತ್ತಾರೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕಾರ್ಯಾಚರಣೆಯ ಪ್ರತಿ ನಿಮಿಷವೂ ಅತ್ಯಂತ ಅಮೂಲ್ಯವಾದುದು ಎಂದು ಚಳ್ಳಕೆರೆ ತಾಲೂಕಿನ ಈ ಕನ್ನಡಿತಿ ಅಧಿಕಾರಿ ಹೇಳಿದರು

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಮೇಘಶ್ರೀ, ಭೂಕುಸಿತಕ್ಕೆ ಬಲಿಯಾದವರ ಶವಗಳನ್ನು ವಯನಾಡ್ ಸ್ಮಶಾನದಲ್ಲಿ ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡುವಾಗಲೂ ಅಲ್ಲಿದ್ದರು.

ಮೇಘಶ್ರೀ ಅವರ ತಂದೆ ರುದ್ರಮುನಿ ಎಸ್‌ಬಿಐನಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ನಿವೃತ್ತರಾದವರು. ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರು. “ಸೋಮವಾರದವರೆಗೂ ನಾನು ವಯನಾಡಿನಲ್ಲಿದ್ದೆ. ಆ ಮಧ್ಯಾಹ್ನ ವಯನಾಡನ್ನು ಬಿಟ್ಟು ಬೆಂಗಳೂರಿಗೆ ಬಂದಿದ್ದೆ. ಘಟನೆ ಮಧ್ಯರಾತ್ರಿ ನಡೆದಿದೆ. ಕೆಲವೇ ಗಂಟೆಗಳಲ್ಲಿ ಮೇಘಶ್ರೀ ಸ್ಥಳಕ್ಕೆ ಧಾವಿಸಿದ್ದಳು. ಈ ತುರ್ತು ಪರಿಸ್ಥಿತಿಯ ಸಮಯದಲ್ಲಿ, ನನ್ನ ಮಗಳು ವಯನಾಡಿನ ಜನರನ್ನು ರಕ್ಷಿಸುವ ಅತ್ಯಂತ ಕಷ್ಟಕರವಾದ ಕೆಲಸವನ್ನು ಮಾಡುತ್ತಿರುವುದು ನನಗೆ ಅತ್ಯಂತ ಹೆಮ್ಮೆ ತಂದಿದೆ” ಎಂದು ತಂದೆ ಹೇಳಿದ್ದಾರೆ.

“ವಯನಾಡಿನ ಪರಿಸ್ಥಿತಿ ಮತ್ತು ಒಬ್ಬ ತಂದೆಯಾಗಿ ನನ್ನ ಮಗಳ ಬಿಡುವಿಲ್ಲದ ಕೆಲಸದ ಬಗ್ಗೆ ನಾನು ಉದ್ವಿಗ್ನಗೊಂಡಿದ್ದೇನೆ. ಆದರೆ ನಾನು ಮೊದಲು ದೇಶದ ಪ್ರಜೆ ತನ್ನ ಕರ್ತವ್ಯಕ್ಕೆ ಹಾಜರಾಗಲು ಮತ್ತು ಕಷ್ಟದಲ್ಲಿರುವ ಜನರಿಗೆ ಸೇವೆ ಸಲ್ಲಿಸಲು ಆಕೆಗೆ ಹೇಳಿದ್ದೇನೆ. ಏಕೆಂದರೆ ಜನರಿಗೆ ಸೇವೆ ಮಾಡುವುದು ಹೆಚ್ಚು ಮುಖ್ಯ” ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT