ರಾಜ್ಯ

ಬಿಜೆಪಿ-ಜೆಡಿಎಸ್ ಪಾದಯಾತ್ರೆ 2ನೇ ದಿನ: ಸಿಎಂ ಸೇರಿ ಅವರ ಮಂತ್ರಿಮಂಡಲ, ಶಾಸಕರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ- ಬಿ ವೈ ವಿಜಯೇಂದ್ರ

ಬಿಜೆಪಿ ಎಸ್​ಸಿ ಮೋರ್ಚಾಗೆ ಎರಡನೇ ದಿನದ ಪಾದಯಾತ್ರೆ ಜವಾಬ್ದಾರಿ ನೀಡಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನ ಪ್ರಮುಖ ನಾಯಕರು ಭಾಗವಹಿಸಿದ್ದಾರೆ.

ಬಿಡದಿ(ರಾಮನಗರ): ಮೈಸೂರು ಅಭಿವೃದ್ಧಿ ಪ್ರಾಧಿಕಾರ (MUDA) ನಿವೇಶನ ಹಂಚಿಕೆಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು ರಾಮನಗರ ಜಿಲ್ಲೆಯ ಬಿಡದಿ ಮೂಲಕ ಸಾಗುತ್ತಿದೆ.

ನಿನ್ನೆ ಶನಿವಾರ ಬೆಂಗಳೂರಿನ ಕೆಂಗೇರಿಯಿಂದ ಪಾದಯಾತ್ರೆ ಆರಂಭಿಸಿದ ನಾಯಕರು ಬಿಡದಿಯಲ್ಲಿ ರಾತ್ರಿ ವಿಶ್ರಾಂತಿ ಪಡೆದರು. ಇಂದು ಬೆಳಗ್ಗೆ ಬಿಡದಿಯಿಂದ 2ನೇ ದಿನದ ಮೈಸೂರು ಪಾದಯಾತ್ರೆ ಆರಂಭವಾಗಿದೆ. ಪಾದಯಾತ್ರೆ ಇಂದು ಸುಮಾರು 20 ಕಿ.ಮೀ. ದೂರ ಸಾಗಲಿದೆ. ನಾಯಕರು ಮಾಯಗಾನಹಳ್ಳಿಯಲ್ಲಿ ಕಾಫಿ ಬ್ರೇಕ್ ತೆಗೆದುಕೊಳ್ಳಲಿದ್ದಾರೆ. ರಾಮನಗರದ ಪದ್ಮಾವತಿ ದೇವಸ್ಥಾನದಲ್ಲಿ ಮಧ್ಯಾಹ್ನದ ಭೋಜನ ಸ್ವೀಕರಿಸುವರು. ರಾತ್ರಿ ಕೆಂಗಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇಂದಿನ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮಟೆ ಬಾರಿಸುವುದರ ಮೂಲಕ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.ಬಿಜೆಪಿ ಎಸ್​ಸಿ ಮೋರ್ಚಾಗೆ ಎರಡನೇ ದಿನದ ಪಾದಯಾತ್ರೆ ಜವಾಬ್ದಾರಿ ನೀಡಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನ ಪ್ರಮುಖ ನಾಯಕರು ಭಾಗವಹಿಸಿದ್ದಾರೆ.

ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಸವಾಲು ನೀಡಿ, ಇವತ್ತು ಆಡಳಿತ ಪಕ್ಷ ವಿರೋಧ ಪಕ್ಷಕ್ಕೆ ಪ್ರಶ್ನೆ ಹಾಕುತ್ತಿರುವುದು ಮೂರ್ಖತನದ ಪರಮಾವಧಿ. ಆ ಕೆಲಸವನ್ನು ಅಧಿಕಾರ ಹೊಂದಿರುವ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ.

ಇವತ್ತು ಆಡಳಿತ ಪಕ್ಷದ ಪರಿಸ್ಥಿತಿ ಹಿರಿಯಕ್ಕನ ಚಾಳಿ ಮನೆಮಂದಿಗೆ ಎಂಬ ರೀತಿಯಲ್ಲಿ ಆಗಿದೆ. ಮುಖ್ಯಮಂತ್ರಿಗಳು ಸೇರಿದಂತೆ ಮಂತ್ರಿಮಂಡಲ, ಶಾಸಕರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಹೀಗಿರುವಾಗ ಈ ರಾಜ್ಯದ ಸಾಮಾನ್ಯ ಜನತೆ ಸರ್ಕಾರದಿಂದ ಏನನ್ನು ನಿರೀಕ್ಷಿಸಲು ಸಾಧ್ಯ, ಭ್ರಷ್ಟಾಚಾರದಿಂದ ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಸರ್ಕಾರದ ದುರಾಡಳಿತದಿಂದ ದೊಡ್ಡ ದೊಡ್ಡ ಕಂಪೆನಿಗಳು ರಾಜ್ಯ ಬಿಟ್ಟು ಹೋಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT