ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು 
ರಾಜ್ಯ

ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ, PSI ಸಾವು ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಆರ್.ಅಶೋಕ್

'ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಅಧಿಕಾರಿಗಳ ಸಾವಾಗುತ್ತಿದೆ. ಮಹರ್ಷಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ನಂತರ ಈಗ ಪಿಎಸ್ ಐ ಪರಶುರಾಮ್ ಸಾವಾಗಿದೆ'

ಯಾದಗಿರಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ ಐ ಪರುಶುರಾಮ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲೆಯ ಸೋಮನಾಳ ಗ್ರಾಮದಲ್ಲಿ ಭಾನುವಾರ ಪರಶುರಾಮ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಅಧಿಕಾರಿಗಳ ಸಾವಾಗುತ್ತಿದೆ. ಮಹರ್ಷಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ನಂತರ ಈಗ ಪಿಎಸ್ ಐ ಪರಶುರಾಮ್ ಸಾವಾಗಿದೆ. ನಮ್ಮ ಕ್ಷೇತ್ರದಲ್ಲಿ ದಲಿತರು ಇರಬಾರದು ಎಂದು ಯಾದಗಿರಿ ಶಾಸಕರು ಹೇಳಿದ್ದಾರೆಂದು ಪರಶುರಾಮ್ ಕುಟುಂಬದವರು ಆರೋಪಿಸಿದ್ದಾರೆ. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿಯೇ ನಾವೆಲ್ಲರೂ ಬದುಕುತ್ತಿದ್ದರೂ ಈ ರೀತಿಯ ಹೇಯ ಕೃತ್ಯ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪೊಲೀಸ್ ಅಧಿಕಾರಿಗಳನ್ನು ಎರಡು ವರ್ಷದ ಒಳಗೆ ವರ್ಗಾವಣೆ ಮಾಡಬಾರದು ಎಂಬ ಕಾನೂನನ್ನು ಕಾಂಗ್ರೆಸ್ ಪಕ್ಷದವರು ಒಂದು ವರ್ಷಕ್ಕೆ ಇಳಿಸಿದ್ದಾರೆ. ಠಾಣೆಗೆ ಬಂದು ಏಳು ತಿಂಗಳಾಗುವಷ್ಟರಲ್ಲಿ ಪರಶುರಾಮ್ ಅವರನ್ನು ವರ್ಗಾವಣೆ ಮಾಡಿದ್ದು ಯಾಕೆ? ಎಂದು ಪ್ರಶ್ನಿಸಿದ ಅವರು ವರ್ಗಾವಣೆ ಮಾಡಿದ ಅಧಿಕಾರಿ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪರಶುರಾಮ್ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿ ಕಣ್ಣೊರೆಸುವ ತಂತ್ರವಾಡುತ್ತಿದೆ. ಸಿಐಡಿ ತನಿಖೆ ಮೇಲೆ ನಂಬಿಕೆ ಇಲ್ಲ. ಸಿಬಿಐ ತನಿಖೆಗೆ ವಹಿಸಬೇಕು, ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿರುವ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಬಂಧಿಸಬೇಕು, ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ; ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿಕೆ ಶಿವಕುಮಾರ್

SCROLL FOR NEXT