ಸಾಂದರ್ಭಿಕ ಚಿತ್ರ  
ರಾಜ್ಯ

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು

ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿರುದ್ಧ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (KPMTCC) ಸಿಎಂ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.

ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ.

ಸಮನ್ವಯ ಸಮಿತಿ ಸಂಚಾಲಕ ಶಶಿಕುಮಾರ್ ಡಿ, ಶಿಕ್ಷಣದ ಕೆಲವು ನಿರ್ಣಾಯಕ ಅಂಶಗಳ ಬಗ್ಗೆ ಸರ್ಕಾರವು ನಿರ್ಧರಿಸುತ್ತಿರುವ ರೀತಿ ನಮಗೆ ಸಮಾಧಾನವಿಲ್ಲ. ಅಧಿಕಾರಿಗಳು ಕೂಡ ಬೇರೆ ಬೇರೆ ಕಾರಣಗಳಿಗಾಗಿ ಶಾಲೆಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ ಎಂದರು.

ಈ ಹಿಂದೆಯೂ ಸಮಿತಿ, ಖಾಸಗಿ ಶಾಲೆಗಳಲ್ಲಿನ ವಿವಿಧ ಬೋರ್ಡ್‌ಗಳ ಮಾನ್ಯತೆ ಮತ್ತು ಅನಧಿಕೃತ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಇಲಾಖೆಯು ಇಚ್ಛಿಸದಿರುವ ಅಕ್ರಮಗಳನ್ನು ಬಯಲಿಗೆಳೆದಿತ್ತು, ಅಧಿಕೃತ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸಮಿತಿ ಮತ್ತು ಪೋಷಕರು ಎತ್ತಿದ ಮತ್ತೊಂದು ಸಮಸ್ಯೆಯೆಂದರೆ 6,8 ಮತ್ತು 9 ನೇ ತರಗತಿಗಳಂತಹ ಕೆಳ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದು. ಪೋಷಕರು ಮತ್ತು ಸಂಬಂಧಪಟ್ಟವರು ಸರ್ಕಾರವು ಎನ್‌ಸಿಇಆರ್‌ಟಿಗೆ ಅನುಗುಣವಾಗಿ ಪಠ್ಯಕ್ರಮವನ್ನು ಪ್ರಮಾಣೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT