ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನ ಹೋಂಸ್ಟೇ ಮೇಲೆ ದಾಳಿ: ಎಲ್ಲಾ 39 ಆರೋಪಿಗಳು ಖುಲಾಸೆ!

ಆರೋಪಿಗಳು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ಘಟನೆಯ ವಿಡಿಯೋಗಳು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ನಂತರ ಘಟನೆ ರಾಷ್ಟ್ರ ಗಮನ ಸೆಳೆದಿತ್ತು.

ಮಂಗಳೂರು: ಮಂಗಳೂರಿನ ಹೋಂ ಸ್ಟೇ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 39 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಸ್ಥಳೀಯ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ.

ಹಿಂದೂ ಜಾಗರಣಾ ವೇದಿಕೆ ಮುಖಂಡ ಸುಭಾಷ್ ಪಡೀಲ್, ಮತ್ತಿತರ ಸಂಘಟನೆಯ ಸದಸ್ಯರನ್ನು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್ ವಿ ಕಾಂತರಾಜು ಖುಲಾಸೆಗೊಳಿಸಿದ್ದಾರೆ.

ಆರೋಪಿಗಳು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ಘಟನೆಯ ವಿಡಿಯೋಗಳು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ನಂತರ ಘಟನೆ ರಾಷ್ಟ್ರ ಗಮನ ಸೆಳೆದಿತ್ತು.

ಏನಿದು ಘಟನೆ? 12 ವರ್ಷಗಳ ಹಿಂದೆ, ಜುಲೈ 28, 2012 ರಂದು 13 ಕಾಲೇಜು ವಿದ್ಯಾರ್ಥಿಗಳು ಪಡೀಲ್ ಜಂಕ್ಷನ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇನಲ್ಲಿ ತಮ್ಮ ಸ್ನೇಹಿತರ ಹುಟ್ಟುಹಬ್ಬದ ಪಾರ್ಟಿ ಮಾಡುತ್ತಿದ್ದಾಗ ಸುಭಾಷ್ ನೇತೃತ್ವದ 40 ಬಲಪಂಥೀಯ ಕಾರ್ಯಕರ್ತರ ಗುಂಪು ಮೂವರು ವಿಡಿಯೋ ಪತ್ರಕರ್ತರೊಂದಿಗೆ ಹೋಂ ಸ್ಟೇ ಮೇಲೆ ದಾಳಿ ನಡೆಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತರಾದ ನವೀನ್ ಸೂರಿಂಜೆ, ಶರಣ್ ರಾಜ್ ಸೇರಿದಂತೆ 44 ಮಂದಿಯನ್ನು ಬಂಧಿಸಿದ್ದ ನಗರ ಪೊಲೀಸರು ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. ತದನಂತರ 2018 ರ ಜನವರಿಯಲ್ಲಿ ಸೂರಿಂಜೆ ಅವರನ್ನು ಖುಲಾಸೆಗೊಳಿಸಲಾಗಿತ್ತು. ಮೂವರು ಆರೋಪಿಗಳು ಸಾವನ್ನಪ್ಪಿದ್ದರೆ, ಅಪ್ರಾಪ್ತ ಆರೋಪಿಯನ್ನು ಬಾಲನ್ಯಾಯ ಮಂಡಳಿಯು ಖುಲಾಸೆಗೊಳಿಸಿತು.

ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಯುವಕರ ಮೇಲೆ ಹಲ್ಲೆ ನಡೆಸಿ, ಕೆಲವು ಯುವತಿಯರ ಬಟ್ಟೆಗಳನ್ನು ಹರಿದು ಹಾಕಿ, ಅನುಚಿತವಾಗಿ ವರ್ತಿಸಿದ್ದರು. ಕೊಠಡಿಯೊಳಗೆ ಅರೆಬಟ್ಟೆಯಲ್ಲಿದ್ದ ಯುವಕರೊಂದಿಗೆ ಕೆಲವು ಯುವತಿಯರನ್ನು ಬಲವಂತವಾಗಿ ಕೂರಿಸಿ, ವೀಡಿಯೊ, ಫೋಟೋಗಳನ್ನು ತೆಗೆದು ಮಾನಸಿಕ ಹಿಂಸೆ ಕೊಟ್ಟಿದ್ದರು ಎಂದು ಸಂತ್ರಸ್ತೆಯರು ಆರೋಪಿಸಿದ್ದರು. ಇದರಲ್ಲಿ ಇಬ್ಬರು ಸಂತ್ರಸ್ತೆಯರು ಪೊಲೀಸ್ ಅಧಿಕಾರಿಗಳ ಪುತ್ರಿಯರಾಗಿದ್ದಾರೆ.

39 ಆರೋಪಿಗಳು ವಿಚಾರಣೆ ಎದುರಿಸಿದರು ಆದರೆ, ಇದೀಗ ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಪರ ವಕೀಲರಾದ ಶಂಭು ಶರ್ಮಾ, ಕಿಶೋರ್ ಕುಮಾರ್ ಮತ್ತಿತರರು ವಾದ ಮಂಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

SCROLL FOR NEXT