ಭಾಸ್ಕರ್ ರಾವ್ 
ರಾಜ್ಯ

ಕಮಿಷನ್ ಪೊಲೀಸರನ್ನು ದುರ್ಬಲಗೊಳಿಸುತ್ತದೆ: ಭಾಸ್ಕರ್ ರಾವ್

‘ಹೆಚ್ಚಿನ ಹಣ ವಸೂಲಿ ಮಾಡುವಂತೆ ರಾಜ್ಯ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದು, ಭ್ರಷ್ಟ ಕೃತ್ಯಗಳಿಗೆ ಎಡೆಮಾಡಿಕೊಡುತ್ತಿದೆ. ಇದು ರಾಜ್ಯ ಪೊಲೀಸರನ್ನು ದುರ್ಬಲಗೊಳಿಸಿದೆ'

ಚಿತ್ರದುರ್ಗ: ರಾಜ್ಯ ಪೊಲೀಸರು ಸಂಪೂರ್ಣವಾಗಿ ದುರ್ಬಲರಾಗಿದ್ದಾರೆ ಎಂದು ಬೆಂಗಳೂರು ನಗರದ ನಿವೃತ್ತ ಪೊಲೀಸ್ ಕಮಿಷನರ್ ಮಂಗಳವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೆಚ್ಚಿನ ಹಣ ವಸೂಲಿ ಮಾಡುವಂತೆ ರಾಜ್ಯ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದು, ಭ್ರಷ್ಟ ಕೃತ್ಯಗಳಿಗೆ ಎಡೆಮಾಡಿಕೊಡುತ್ತಿದೆ. ಇದು ರಾಜ್ಯ ಪೊಲೀಸರನ್ನು ದುರ್ಬಲಗೊಳಿಸಿದೆ ಎಂದರು.

ಕಮಿಷನ್ ಕೊಡುವವರೆಗೂ ಪೊಲೀಸರಿಗೆ ಸರಿಯಾದ ಪೋಸ್ಟಿಂಗ್ ನೀಡುವುದಿಲ್ಲ. ಇದು ಅವರ ಸೇವೆಗಳ ಮೇಲೆ ಪರಿಣಾಮ ಬೀರುತ್ತಿದೆ. ಇನ್ನುಳಿದ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ಗಳಿಂದ ಕಮಿಷನ್ ಬರುತ್ತದೆ. ಆದರೆ ಪೊಲೀಸ್ ಇಲಾಖೆಯಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಬೇಕಿದ್ದು, ಹಣ ಪಾವತಿಸುವಂತೆ ಸರ್ಕಾರ ಪೊಲೀಸ್ ಇಲಾಖೆಗೆ ಒತ್ತಡ ಹೇರುತ್ತಿರುವುದು PSI ಪರಶುರಾಮ್ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಅವರು ಹೇಳಿದರು.

ಬಲಿಷ್ಠ ಮುಖ್ಯಮಂತ್ರಿಯಿದ್ದರೆ ಈ ರೀತಿಯ ಕಮಿಷನ್ ಘಟನೆಗಳು ನಡೆಯುವುದಿಲ್ಲ, ಆದರೆ, ನಮ್ಮಲ್ಲಿ ಒಬ್ಬ ದುರ್ಬಲ ಮುಖ್ಯಮಂತ್ರಿ ಇದ್ದಾರೆ ಎಂದು ಭಾಸ್ಕರ್ ರಾವ್ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT