ಎಲೆಕ್ಟ್ರಿಕ್ ಬಸ್ ಗೆ ಬೆಂಕಿ 
ರಾಜ್ಯ

Bengaluru Rain: BMTC ಎಲೆಕ್ಟ್ರಿಕ್ ಬಸ್ ಗೆ ಬೆಂಕಿ, ಪ್ರಯಾಣಿಕರು ಪಾರು, ಕಾರಣ ನೀರು!

ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ನಾನಾ ಅವಾಂತರಕ್ಕೆ ಕಾರಣವಾಗುತ್ತಿದ್ದು ಇದೀಗ ಇದೇ ಮಳೆ ಕಾರಣದಿಂದಾಗಿ BMTC ಎಲೆಕ್ಟ್ರಿಕ್ ಬಸ್ ವೊಂದು ಬೆಂಕಿಗಾಹುತಿಯಾಗಿದೆ.

ಅಚ್ಚರಿಯಾದರೂ ಸತ್ಯ.. ನಾಗವಾರ - ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ನಿನ್ನೆ ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ (Electric Bus) ಬೆಂಕಿಗಾಹುತಿಯಾಗಿದೆ.

ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಸಾಧ್ಯತೆ

ಇನ್ನು ಸರ್ವೀಸ್ ರಸ್ತೆಯಲ್ಲಿ ತುಂಬಿದ್ದ ನೀರಿನಲ್ಲಿ ಹೋಗುತ್ತಿದ್ದ ವೇಳೆ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನ ಇಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅಗ್ನಿಶಾಮಕ ವಾಹನ ಸ್ಥಳಕ್ಕೆ ತಲುಪುವ ವೇಳೆಗೆ ಬಸ್ ಬೆಂಕಿಗಾಹುತಿಯಾಗಿದೆ.

ನಂತರ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಸ್ ಏಕಾಏಕಿ 2 ಅಡಿ ಉದ್ಧದ ನೀರಿನಲ್ಲಿ ಬಸ್ ಚಲಾಸಿದ್ದರಿಂದ ಅದರ ಎಲೆಕ್ಟ್ರಾನಿಕ್ ಯಂತ್ರಗಳಿಗೆ ನೀರು ನುಗ್ಗಿದ್ದು ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವ ಸಾಧ್ಯತೆ ಇದೆ. ಹೀಗಾಗಿ ಬಸ್ ಗೆ ಬೆಂಕಿ ಹೊತ್ತಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಸ್ತುತ ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ