ಪ್ರಿಯಾಂಕ್ ಖರ್ಗೆ 
ರಾಜ್ಯ

ಮೈಸೂರಿನಲ್ಲಿ 600 ಕೋಟಿ ರೂ. ಹೂಡಿಕೆ, ಹೊಸ ಕಂಪನಿಗಳ ಸ್ಥಾಪನೆ; 5,000 ಉದ್ಯೋಗ ಸೃಷ್ಟಿ: ಪ್ರಿಯಾಂಕ್ ಖರ್ಗೆ

'ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ'

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ (ESDM) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮ ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚುವರಿಯಾಗಿ, 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗಗಳಿಗೆ ಚಾಲನೆ ನೀಡಲಿದೆ ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಸಹಕಾರವಾಗಲಿದೆ, ಈ ಎಲ್ಲಾ ಬೆಳವಣಿಗೆಯಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು (ಆಗಸ್ಟ್ 6) ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಇಂಡಿಯಾ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ (ಐಇಎಸ್ಎ) ಸಹಯೋಗದಲ್ಲಿ 4ನೆ ಆವೃತ್ತಿ ಅನಾವರಣಗೊಳಿಸುತ್ತಿರುವ ಸಂದರ್ಭದಲ್ಲಿ ನೀಡಿರುವ ಮೈಸೂರನ್ನು ಉದ್ಯೋಗಶೀಲ ನಗರವನ್ನಾಗಿ ವರ್ಧಿಸಲು ಮಾಹಿತಿ ತಂತ್ರಜ್ಞಾನ ಇಲಾಖೆ ಯೋಜಿಸಿದೆ ಎಂದು ಸಚಿವರು ಸಂದೇಶದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT