ಎಸ್ ಸುರೇಶ್ ಕುಮಾರ್ 
ರಾಜ್ಯ

ರಾಜಕಾರಣಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಾರ್ವಜನಿಕ ಭಾಷಣ ತರಬೇತಿ ನೀಡಬಹುದಲ್ಲವೇ: ಸುರೇಶ್ ಕುಮಾರ್

ಸಾರ್ವಜನಿಕ ಸಂವಾದ ತೀರಾ ಕೆಳಕ್ಕಿಳಿಯುತ್ತಿದೆ. ಏಕವಚನ ಸಂಬೋಧನೆ ರಾರಾಜಿಸುತ್ತಿದೆ. ಜೊತೆಗೆ ವಾಚಾಮಗೋಚರ ಬೈಗುಳ ವಿಜೃಂಭಿಸುತ್ತಿದೆ. ಇದರಿಂದ ಸಮಾಜಕ್ಕೆ, ಅದರಲ್ಲಿಯೂ ವಿಶೇಷವಾಗಿ ಎಳೆಯ ಜನಾಂಗಕ್ಕೆ ಭಾರಿ ತಪ್ಪು ಸಂದೇಶ ಹೋಗುತ್ತಿದೆ.

ಬೆಂಗಳೂರು: ರಾಜಕಾರಣಿಗಳ ನಡುವೆ ಸಾರ್ವಜನಿಕ ಸಂವಹನದ ಗುಣಮಟ್ಟ ಕುಸಿಯುತ್ತಿದೆ, ನಾಯಕರ ಆರೋಪ ಪ್ರತ್ಯಾರೋಪ ಹೇಳಿಕೆಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ಏಕವಚನ ಪ್ರಯೋಗ, ಕೀಳು ಮಟ್ಟದ ಬೈಗುಳಗಳನ್ನು ಎಲ್ಲರೂ ಮೇಲ್ಪಂಕ್ತಿಯನ್ನಾಗಿ ಸ್ವೀಕರಿಸಿದರೆ ಅನಾಹುತವಾಗುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ರಾಜ್ಯದ ಎಲ್ಲಾ ದೊಡ್ಡ ಸ್ಥಾನದ ರಾಜಕೀಯ ನಾಯಕರಲ್ಲಿ ಒಂದು ಮನವಿ. ಸಾರ್ವಜನಿಕ ಸಂವಾದ ತೀರಾ ಕೆಳಕ್ಕಿಳಿಯುತ್ತಿದೆ. ಏಕವಚನ ಸಂಬೋಧನೆ ರಾರಾಜಿಸುತ್ತಿದೆ. ಜೊತೆಗೆ ವಾಚಾಮಗೋಚರ ಬೈಗುಳ ವಿಜೃಂಭಿಸುತ್ತಿದೆ.ಇದರಿಂದ ಸಮಾಜಕ್ಕೆ, ಅದರಲ್ಲಿಯೂ ವಿಶೇಷವಾಗಿ ಎಳೆಯ ಜನಾಂಗಕ್ಕೆ ಭಾರಿ ತಪ್ಪು ಸಂದೇಶ ಹೋಗುತ್ತಿದೆ. ಈ ಏಕವಚನ ಪ್ರಯೋಗ, ಕೀಳು ಮಟ್ಟದ ಬೈಗುಳಗಳನ್ನು ಎಲ್ಲರೂ ಮೇಲ್ಪಂಕ್ತಿಯನ್ನಾಗಿ ಸ್ವೀಕರಿಸಿದರೆ ಅನಾಹುತವಾಗುತ್ತದೆ. ದಯವಿಟ್ಟು ಸಾರ್ವಜನಿಕ ವೇದಿಕೆಗಳನ್ನು ಏಕವಚನ ಹಾಗೂ ಬೈಗುಳಗಳ ತಾಣ ಮಾಡಿಕೊಳ್ಳಬಾರದು. ಇದು ವಿಧಾನಸಭೆ ಮತ್ತು ವಿಧಾನ ಪರಿಷತ್ತಿಗೂ ಅನ್ವಯಿಸುತ್ತದೆ’ ಎಂದಿದ್ದಾರೆ.

ನಮ್ಮದೇನೇ ಸಿಟ್ಟು, ಸಾತ್ವಿಕ ಕೋಪ, ಆಕ್ರೋಶ ಇದ್ದರೂ ಅದನ್ನು ವ್ಯಕ್ತಪಡಿಸುವುದಕ್ಕೆ ಸೂಕ್ತ ರೀತಿಯ ಮಾತು, ಹಾವಭಾವ ಅಗತ್ಯವಿದೆ. ಇದು ಸಾಮಾಜಿಕ ಸ್ವಾಸ್ಥ್ಯಕ್ಕೆ ಬಹಳ ಮುಖ್ಯ. ಇದು ವಿಧಾನಸಭೆ ಮತ್ತು ಪರಿಷತ್ತಿಗೂ ಅನ್ವಯಿಸುತ್ತದೆ ಎಂದರು. ಸಾರ್ವಜನಿಕ ಜೀವನದಲ್ಲಿ ಬಹುವಚನ ಪ್ರಯೋಗ, ಬೈಗುಳವಿಲ್ಲದೆ ರಾಜಕೀಯ ನಾಯಕರು ಸಂವಹನ ನಡೆಸುವಂತೆ ಕಲಿಸುವ ಶಿಬಿರ ಯೋಜಿಸುವುದರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಖ್ಯಪಾತ್ರ ವಹಿಸಬಹುದಲ್ಲವೇ? ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT