ಎಸ್ ಸುರೇಶ್ ಕುಮಾರ್ 
ರಾಜ್ಯ

ರಾಜಕಾರಣಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಾರ್ವಜನಿಕ ಭಾಷಣ ತರಬೇತಿ ನೀಡಬಹುದಲ್ಲವೇ: ಸುರೇಶ್ ಕುಮಾರ್

ಸಾರ್ವಜನಿಕ ಸಂವಾದ ತೀರಾ ಕೆಳಕ್ಕಿಳಿಯುತ್ತಿದೆ. ಏಕವಚನ ಸಂಬೋಧನೆ ರಾರಾಜಿಸುತ್ತಿದೆ. ಜೊತೆಗೆ ವಾಚಾಮಗೋಚರ ಬೈಗುಳ ವಿಜೃಂಭಿಸುತ್ತಿದೆ. ಇದರಿಂದ ಸಮಾಜಕ್ಕೆ, ಅದರಲ್ಲಿಯೂ ವಿಶೇಷವಾಗಿ ಎಳೆಯ ಜನಾಂಗಕ್ಕೆ ಭಾರಿ ತಪ್ಪು ಸಂದೇಶ ಹೋಗುತ್ತಿದೆ.

ಬೆಂಗಳೂರು: ರಾಜಕಾರಣಿಗಳ ನಡುವೆ ಸಾರ್ವಜನಿಕ ಸಂವಹನದ ಗುಣಮಟ್ಟ ಕುಸಿಯುತ್ತಿದೆ, ನಾಯಕರ ಆರೋಪ ಪ್ರತ್ಯಾರೋಪ ಹೇಳಿಕೆಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ಏಕವಚನ ಪ್ರಯೋಗ, ಕೀಳು ಮಟ್ಟದ ಬೈಗುಳಗಳನ್ನು ಎಲ್ಲರೂ ಮೇಲ್ಪಂಕ್ತಿಯನ್ನಾಗಿ ಸ್ವೀಕರಿಸಿದರೆ ಅನಾಹುತವಾಗುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ರಾಜ್ಯದ ಎಲ್ಲಾ ದೊಡ್ಡ ಸ್ಥಾನದ ರಾಜಕೀಯ ನಾಯಕರಲ್ಲಿ ಒಂದು ಮನವಿ. ಸಾರ್ವಜನಿಕ ಸಂವಾದ ತೀರಾ ಕೆಳಕ್ಕಿಳಿಯುತ್ತಿದೆ. ಏಕವಚನ ಸಂಬೋಧನೆ ರಾರಾಜಿಸುತ್ತಿದೆ. ಜೊತೆಗೆ ವಾಚಾಮಗೋಚರ ಬೈಗುಳ ವಿಜೃಂಭಿಸುತ್ತಿದೆ.ಇದರಿಂದ ಸಮಾಜಕ್ಕೆ, ಅದರಲ್ಲಿಯೂ ವಿಶೇಷವಾಗಿ ಎಳೆಯ ಜನಾಂಗಕ್ಕೆ ಭಾರಿ ತಪ್ಪು ಸಂದೇಶ ಹೋಗುತ್ತಿದೆ. ಈ ಏಕವಚನ ಪ್ರಯೋಗ, ಕೀಳು ಮಟ್ಟದ ಬೈಗುಳಗಳನ್ನು ಎಲ್ಲರೂ ಮೇಲ್ಪಂಕ್ತಿಯನ್ನಾಗಿ ಸ್ವೀಕರಿಸಿದರೆ ಅನಾಹುತವಾಗುತ್ತದೆ. ದಯವಿಟ್ಟು ಸಾರ್ವಜನಿಕ ವೇದಿಕೆಗಳನ್ನು ಏಕವಚನ ಹಾಗೂ ಬೈಗುಳಗಳ ತಾಣ ಮಾಡಿಕೊಳ್ಳಬಾರದು. ಇದು ವಿಧಾನಸಭೆ ಮತ್ತು ವಿಧಾನ ಪರಿಷತ್ತಿಗೂ ಅನ್ವಯಿಸುತ್ತದೆ’ ಎಂದಿದ್ದಾರೆ.

ನಮ್ಮದೇನೇ ಸಿಟ್ಟು, ಸಾತ್ವಿಕ ಕೋಪ, ಆಕ್ರೋಶ ಇದ್ದರೂ ಅದನ್ನು ವ್ಯಕ್ತಪಡಿಸುವುದಕ್ಕೆ ಸೂಕ್ತ ರೀತಿಯ ಮಾತು, ಹಾವಭಾವ ಅಗತ್ಯವಿದೆ. ಇದು ಸಾಮಾಜಿಕ ಸ್ವಾಸ್ಥ್ಯಕ್ಕೆ ಬಹಳ ಮುಖ್ಯ. ಇದು ವಿಧಾನಸಭೆ ಮತ್ತು ಪರಿಷತ್ತಿಗೂ ಅನ್ವಯಿಸುತ್ತದೆ ಎಂದರು. ಸಾರ್ವಜನಿಕ ಜೀವನದಲ್ಲಿ ಬಹುವಚನ ಪ್ರಯೋಗ, ಬೈಗುಳವಿಲ್ಲದೆ ರಾಜಕೀಯ ನಾಯಕರು ಸಂವಹನ ನಡೆಸುವಂತೆ ಕಲಿಸುವ ಶಿಬಿರ ಯೋಜಿಸುವುದರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಖ್ಯಪಾತ್ರ ವಹಿಸಬಹುದಲ್ಲವೇ? ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT