ನಟ ದರ್ಶನ್(ಸಂಗ್ರಹ ಚಿತ್ರ) 
ರಾಜ್ಯ

ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ: ಅಧಿಕಾರಿಗಳಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ

ನಟ ದರ್ಶನ್ ಗೆ ಮನೆ ಊಟಕ್ಕೆ ಅವಕಾಶ ನೀಡಬೇಡಿ, ಜೈಲೂಟ ತಿಂದು ಅವರಿಗೆ ಆರೋಗ್ಯ ಸಮಸ್ಯೆಯೇನೂ ಆಗಿಲ್ಲ, ಚೆನ್ನಾಗಿದ್ದಾರೆ, ಕಾನೂನಿನಲ್ಲಿ ಕೊಲೆ ಆರೋಪಿಗೆ ಮನೆಯೂಟಕ್ಕೆ ಅವಕಾಶವಿಲ್ಲ ಎಂಬುದಾಗಿ ನಿರಾಕರಿಸಿದ್ದಾರೆ.

ಬೆಂಗಳೂರು: ಜೈಲೂಟ ರುಚಿಸುತ್ತಿಲ್ಲ, ತೂಕ ಕಳೆದುಕೊಳ್ಳುತ್ತಿದ್ದೇನೆ, ಮನೆಯಿಂದ ಊಟ, ಹಾಸಿಗೆ ತರಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಮಾಡಿದ್ದ ಮನವಿಗೆ ಸಂಬಂಧಪಟ್ಟಂತೆ ಜೈಲು ಅಧಿಕಾರಿಗಳು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದಾರೆ.

ನಟ ದರ್ಶನ್ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಮನೆ ಊಟದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಈ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಅರ್ಜಿ ಸಲ್ಲಿಸುವಂತೆಯೂ ನಟ ದರ್ಶನ್ ಪರ ವಕೀಲರಿಗೆ ಸೂಚಿಸಿ, ಆಗಸ್ಟ್.20ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿತ್ತು.

ನಟ ದರ್ಶನ್ ಗೆ ಮನೆ ಊಟಕ್ಕೆ ಅವಕಾಶ ನೀಡಬೇಡಿ, ಜೈಲೂಟ ತಿಂದು ಅವರಿಗೆ ಆರೋಗ್ಯ ಸಮಸ್ಯೆಯೇನೂ ಆಗಿಲ್ಲ, ಚೆನ್ನಾಗಿದ್ದಾರೆ, ಕಾನೂನಿನಲ್ಲಿ ಕೊಲೆ ಆರೋಪಿಗೆ ಮನೆಯೂಟಕ್ಕೆ ಅವಕಾಶವಿಲ್ಲ ಎಂಬುದಾಗಿ ನಿರಾಕರಿಸಿದ್ದಾರೆ. ಈ ಮೂಲಕ ನಟ ದರ್ಶನ್ ಗೆ ಮತ್ತೆ ಶಾಕ್ ನೀಡಿದ್ದಾರೆ.

ಈ ಕುರಿತು ಆಗಸ್ಟ್.20ರಂದು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು, ಜೈಲು ಅಧಿಕಾರಿಗಳು ಮನೆಯೂಟ ನಿರಾಕರಣೆ ಮಾಡಲು ಕಾರಣವೇನು ಎನ್ನುವ ಬಗ್ಗೆಯೂ ಆಕ್ಷೇಪಣೆ ಸಲ್ಲಿಸುವ ತಯಾರಿ ನಡೆಸಿದ್ದಾರೆ. ಅಂದು ಕೋರ್ಟ್ ಯಾವ ನಿರ್ದೇಶನ, ಆದೇಶ ಹೊರಡಿಸಲಿದೆ ಎಂದು ಕಾದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT