ಹಳಿ ದುರಸ್ತಿ ಕಾಮಗಾರಿ 
ರಾಜ್ಯ

ಹಳಿ ದುರಸ್ತಿ ಕಾಮಗಾರಿ ಪೂರ್ಣ: ಮಂಗಳೂರು - ಬೆಂಗಳೂರು ರೈಲು ಸಂಚಾರ ಪುನರಾರಂಭ

ಭಾರೀ ಭೂಕುಸಿತದ ನಂತರ ಕರ್ನಾಟಕ ಕರಾವಳಿಯನ್ನು ಬೆಂಗಳೂರು ಮತ್ತು ಇತರ ಒಳನಾಡುಗಳೊಂದಿಗೆ ಸಂಪರ್ಕ ಕಲ್ಪಿಸುವ ಈ ವಿಭಾಗದಲ್ಲಿ ಜುಲೈ 27 ರಿಂದ ರೈಲುಗಳ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಮಂಗಳೂರು: ಭೂಕುಸಿತದಿಂದ ಹಾಳಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ವಿಭಾಗದ ಕಡಗರವಳ್ಳಿ ಹಾಗೂ ಯಡಕುಮಾರಿ ನಿಲ್ದಾಣಗಳ ನಡುವಿನ ಹಳಿಗಳ ದುರಸ್ತಿ ಕಾಮಗಾರಿ ಗುರುವಾರ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಭಾರೀ ಭೂಕುಸಿತದ ನಂತರ ಕರ್ನಾಟಕ ಕರಾವಳಿಯನ್ನು ಬೆಂಗಳೂರು ಮತ್ತು ಇತರ ಒಳನಾಡುಗಳೊಂದಿಗೆ ಸಂಪರ್ಕ ಕಲ್ಪಿಸುವ ಈ ವಿಭಾಗದಲ್ಲಿ ಜುಲೈ 27 ರಿಂದ ರೈಲುಗಳ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಇಂದು ಹಳಿಗಳ ಮರುಸ್ಥಾಪನೆ ಯಶಸ್ವಿಯಾಗಿ ಪೂರ್ಣಗೊಂಡ ನಂತರ, ಮೊದಲ ಪ್ಯಾಸೆಂಜರ್ ರೈಲು ಸಂಖ್ಯೆ 16575 ಯಶವಂತಪುರ - ಮಂಗಳೂರು ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ವೇಗದ ಮೀತಿಯನ್ನು ಗಂಟೆಗೆ 15 ಕಿ.ಮೀ ಗೆ ನಿರ್ಬಂಧ ಹೇರಲಾಗಿದೆ.

ಕಳೆದ 13 ದಿನಗಳಿಂದ ಬೆಂಗಳೂರು ಸೇರಿದಂತೆ ನಾನಾ ನಗರಗಳ ಜತೆಗೆ ಕರಾವಳಿ ರೈಲು ಸಂಪರ್ಕ ರದ್ದುಗೊಳಿಸಲಾಗಿತ್ತು ಆ.3 ಕ್ಕೆ ದುರಸ್ತಿ ಸಂಪೂರ್ಣವಾದ ಹಿನ್ನೆಲೆ ಭಾನುವಾರ ಹಾಗೂ ಸೋಮವಾರ ಖಾಲಿ ಗೂಡ್ಸ್‌ ರೈಲುಗಳ ಸಂಚಾರ ಮಾಡಲಾಗಿದ್ದು ಸಂಚಾರ ಯಶಸ್ವಿಯಾಗಿದೆ. ಮಂಗಳವಾರದಿಂದ ಎರಡು ದಿನಗಳ ಕಾಲ ಸರಕುಗಳನ್ನೊಳಗೊಂಡ ಗೂಡ್ಸ್‌ ರೈಲು ಸಂಚಾರ ಯಶಸ್ವಿಯಾದ ಬಳಿಕ ಇಂದಿನಿಂದ ಪ್ರಯಾಣಿಕ ರೈಲುಗಳಿಗೆ ಅವಕಾಶ ಮಾಡಿಕೊಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT