ಹಳಿ ದುರಸ್ತಿ ಕಾಮಗಾರಿ 
ರಾಜ್ಯ

ಹಳಿ ದುರಸ್ತಿ ಕಾಮಗಾರಿ ಪೂರ್ಣ: ಮಂಗಳೂರು - ಬೆಂಗಳೂರು ರೈಲು ಸಂಚಾರ ಪುನರಾರಂಭ

ಭಾರೀ ಭೂಕುಸಿತದ ನಂತರ ಕರ್ನಾಟಕ ಕರಾವಳಿಯನ್ನು ಬೆಂಗಳೂರು ಮತ್ತು ಇತರ ಒಳನಾಡುಗಳೊಂದಿಗೆ ಸಂಪರ್ಕ ಕಲ್ಪಿಸುವ ಈ ವಿಭಾಗದಲ್ಲಿ ಜುಲೈ 27 ರಿಂದ ರೈಲುಗಳ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಮಂಗಳೂರು: ಭೂಕುಸಿತದಿಂದ ಹಾಳಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ವಿಭಾಗದ ಕಡಗರವಳ್ಳಿ ಹಾಗೂ ಯಡಕುಮಾರಿ ನಿಲ್ದಾಣಗಳ ನಡುವಿನ ಹಳಿಗಳ ದುರಸ್ತಿ ಕಾಮಗಾರಿ ಗುರುವಾರ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಭಾರೀ ಭೂಕುಸಿತದ ನಂತರ ಕರ್ನಾಟಕ ಕರಾವಳಿಯನ್ನು ಬೆಂಗಳೂರು ಮತ್ತು ಇತರ ಒಳನಾಡುಗಳೊಂದಿಗೆ ಸಂಪರ್ಕ ಕಲ್ಪಿಸುವ ಈ ವಿಭಾಗದಲ್ಲಿ ಜುಲೈ 27 ರಿಂದ ರೈಲುಗಳ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಇಂದು ಹಳಿಗಳ ಮರುಸ್ಥಾಪನೆ ಯಶಸ್ವಿಯಾಗಿ ಪೂರ್ಣಗೊಂಡ ನಂತರ, ಮೊದಲ ಪ್ಯಾಸೆಂಜರ್ ರೈಲು ಸಂಖ್ಯೆ 16575 ಯಶವಂತಪುರ - ಮಂಗಳೂರು ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ವೇಗದ ಮೀತಿಯನ್ನು ಗಂಟೆಗೆ 15 ಕಿ.ಮೀ ಗೆ ನಿರ್ಬಂಧ ಹೇರಲಾಗಿದೆ.

ಕಳೆದ 13 ದಿನಗಳಿಂದ ಬೆಂಗಳೂರು ಸೇರಿದಂತೆ ನಾನಾ ನಗರಗಳ ಜತೆಗೆ ಕರಾವಳಿ ರೈಲು ಸಂಪರ್ಕ ರದ್ದುಗೊಳಿಸಲಾಗಿತ್ತು ಆ.3 ಕ್ಕೆ ದುರಸ್ತಿ ಸಂಪೂರ್ಣವಾದ ಹಿನ್ನೆಲೆ ಭಾನುವಾರ ಹಾಗೂ ಸೋಮವಾರ ಖಾಲಿ ಗೂಡ್ಸ್‌ ರೈಲುಗಳ ಸಂಚಾರ ಮಾಡಲಾಗಿದ್ದು ಸಂಚಾರ ಯಶಸ್ವಿಯಾಗಿದೆ. ಮಂಗಳವಾರದಿಂದ ಎರಡು ದಿನಗಳ ಕಾಲ ಸರಕುಗಳನ್ನೊಳಗೊಂಡ ಗೂಡ್ಸ್‌ ರೈಲು ಸಂಚಾರ ಯಶಸ್ವಿಯಾದ ಬಳಿಕ ಇಂದಿನಿಂದ ಪ್ರಯಾಣಿಕ ರೈಲುಗಳಿಗೆ ಅವಕಾಶ ಮಾಡಿಕೊಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!