ಹಳಿ ದುರಸ್ತಿ ಕಾಮಗಾರಿ 
ರಾಜ್ಯ

ಹಳಿ ದುರಸ್ತಿ ಕಾಮಗಾರಿ ಪೂರ್ಣ: ಮಂಗಳೂರು - ಬೆಂಗಳೂರು ರೈಲು ಸಂಚಾರ ಪುನರಾರಂಭ

ಭಾರೀ ಭೂಕುಸಿತದ ನಂತರ ಕರ್ನಾಟಕ ಕರಾವಳಿಯನ್ನು ಬೆಂಗಳೂರು ಮತ್ತು ಇತರ ಒಳನಾಡುಗಳೊಂದಿಗೆ ಸಂಪರ್ಕ ಕಲ್ಪಿಸುವ ಈ ವಿಭಾಗದಲ್ಲಿ ಜುಲೈ 27 ರಿಂದ ರೈಲುಗಳ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಮಂಗಳೂರು: ಭೂಕುಸಿತದಿಂದ ಹಾಳಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ವಿಭಾಗದ ಕಡಗರವಳ್ಳಿ ಹಾಗೂ ಯಡಕುಮಾರಿ ನಿಲ್ದಾಣಗಳ ನಡುವಿನ ಹಳಿಗಳ ದುರಸ್ತಿ ಕಾಮಗಾರಿ ಗುರುವಾರ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಭಾರೀ ಭೂಕುಸಿತದ ನಂತರ ಕರ್ನಾಟಕ ಕರಾವಳಿಯನ್ನು ಬೆಂಗಳೂರು ಮತ್ತು ಇತರ ಒಳನಾಡುಗಳೊಂದಿಗೆ ಸಂಪರ್ಕ ಕಲ್ಪಿಸುವ ಈ ವಿಭಾಗದಲ್ಲಿ ಜುಲೈ 27 ರಿಂದ ರೈಲುಗಳ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಇಂದು ಹಳಿಗಳ ಮರುಸ್ಥಾಪನೆ ಯಶಸ್ವಿಯಾಗಿ ಪೂರ್ಣಗೊಂಡ ನಂತರ, ಮೊದಲ ಪ್ಯಾಸೆಂಜರ್ ರೈಲು ಸಂಖ್ಯೆ 16575 ಯಶವಂತಪುರ - ಮಂಗಳೂರು ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ವೇಗದ ಮೀತಿಯನ್ನು ಗಂಟೆಗೆ 15 ಕಿ.ಮೀ ಗೆ ನಿರ್ಬಂಧ ಹೇರಲಾಗಿದೆ.

ಕಳೆದ 13 ದಿನಗಳಿಂದ ಬೆಂಗಳೂರು ಸೇರಿದಂತೆ ನಾನಾ ನಗರಗಳ ಜತೆಗೆ ಕರಾವಳಿ ರೈಲು ಸಂಪರ್ಕ ರದ್ದುಗೊಳಿಸಲಾಗಿತ್ತು ಆ.3 ಕ್ಕೆ ದುರಸ್ತಿ ಸಂಪೂರ್ಣವಾದ ಹಿನ್ನೆಲೆ ಭಾನುವಾರ ಹಾಗೂ ಸೋಮವಾರ ಖಾಲಿ ಗೂಡ್ಸ್‌ ರೈಲುಗಳ ಸಂಚಾರ ಮಾಡಲಾಗಿದ್ದು ಸಂಚಾರ ಯಶಸ್ವಿಯಾಗಿದೆ. ಮಂಗಳವಾರದಿಂದ ಎರಡು ದಿನಗಳ ಕಾಲ ಸರಕುಗಳನ್ನೊಳಗೊಂಡ ಗೂಡ್ಸ್‌ ರೈಲು ಸಂಚಾರ ಯಶಸ್ವಿಯಾದ ಬಳಿಕ ಇಂದಿನಿಂದ ಪ್ರಯಾಣಿಕ ರೈಲುಗಳಿಗೆ ಅವಕಾಶ ಮಾಡಿಕೊಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT