ಸಂಗ್ರಹ ಚಿತ್ರ 
ರಾಜ್ಯ

ಇಂದಿನಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಸ್ಯೋದ್ಯಾನ ಲಾಲ್ ಬಾಗ್ ನಲ್ಲಿ ಪ್ರತೀ ವರ್ಷ ನಡೆಯುವ ಫಲಪುಷ್ಪ ಪ್ರದರ್ಶನ ಗುರುವಾರದಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಗಮ‌ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.

ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಪಾರ್ಕಿಂಗ್ ಸ್ಥಳಗಳು ಇಂತಿವೆ...

  • ಮರಿಗೌಡ ರಸ್ತೆಯ ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ಬೈಕ್ ಪಾರ್ಕಿಂಗ್​​

  • ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ ವ್ಯವಸ್ಥೆ

  • ಮರಿಗೌಡ ರಸ್ತೆಯ ಹಾಪ್ ಕಾಮ್ಸ್​​ನಲ್ಲಿ ಬೈಕ್ ಹಾಗೂ ಕಾರು ನಿಲುಗಡೆ

  • ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಹಾಗೂ ಕಾರು ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಪಾರ್ಕಿಂಗ್ ನಿಷೇಧ

  • ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್​ವರೆಗೆ ರಸ್ತೆಯ ಎರಡು ಬದಿ

  • ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್​ವರೆಗೆ ರಸ್ತೆಯ ಎರಡು ಬದಿ

  • ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಭಾಗ್ ಮುಖ್ಯದ್ವಾರದ ವರೆಗೆ

  • ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್​ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್​ವರೆಗೆ

  • ಬಿಟಿಎಸ್ ಬಸ್ ನಿಲ್ದಾಣ, ಬಿಎಂಟಿಸಿ ಜಂಕ್ಷನ್​ನಿಂದ ರಸ್ತೆಯ ಎರಡು ಬದಿಗಳಲ್ಲಿ

  • ಕೃಂಬಿಗಲ್ ರಸ್ತೆಯ ಎರಡು ಕಡೆಗಳಲ್ಲಿ

  • ಲಾಲ್‌ಬಾಗ್ ವೆಸ್ಟ್ಗೇಟ್‌ನಿಂದ ಆರ್.ವಿ. ಟೀರ್ಸ್​ ಕಾಲೇಜ್‌ವರೆಗೆ

  • ಆರ್‌ವಿ ಟೀರ್ಸ್​ ಕಾಲೇಜ್‌ನಿಂದ ಅಶೋಕ ಪಿಲ್ಲರ್​ವರೆಗೆ

  • ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ

ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡುವವರು ಸಂಚಾರ ದಟ್ಟಣೆಯನ್ನು ತಪ್ಪಿಸಲು ಮೆಟ್ರೋ, ಬಿಎಂಟಿಸಿ, ಇತ್ಯಾದಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವಂತೆಯೂ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT