ಸಂಗ್ರಹ ಚಿತ್ರ 
ರಾಜ್ಯ

ಖತರ್ನಾಕ್ ವಾಹನ ಕಳ್ಳರ ಸೆರೆ: 20 ಲಕ್ಷ ರೂ. ಮೌಲ್ಯದ 32 ವಾಹನ ವಶಕ್ಕೆ

ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ.

ಬೆಂಗಳೂರು: 2 ಪ್ರತ್ಯೇಕ ಪ್ರಕರಣಗಳಲ್ಲಿ ನಗರ ಪೊಲೀಸರು ಎರಡು ಆಟೋ ರಿಕ್ಷಾ ಸೇರಿದಂತೆ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ,

ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ. ಇದರ ಅನ್ವಯ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು.

ಈತ ಚಿಕ್ಕಬಳ್ಳಾಪುರ ನಿವಾಸಿಯಾಗಿದ್ದು, ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆ ವಾಹನಗಳ ಕುರಿತು ಮಾಹಿತಿ ನೀಡಿದ್ದ.

ಕೊಡಿಮಂಚೇನಹಳ್ಳಿ ಬಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಬೈಕ್‌ಗಳನ್ನು ಬಚ್ಚಿಟ್ಟಿರುವುದಾಗಿ ಹೇಳಿದ್ದ. ಇದರಂತೆ ಪೊಲೀಸರು .9 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈತನ ವಿರುದ್ಧ ಬೆಂಗಳೂರು ಮತ್ತು ತುಮಕೂರಿನಲ್ಲಿ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ.

ಮತ್ತೊಂದು ಘಟನೆಯಲ್ಲಿ ಬೈಕ್ ಮತ್ತು ಆಟೋ ರಿಕ್ಷಾಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ 38 ವರ್ಷದ ಮೆಕ್ಯಾನಿಕ್ ನನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.

ಈತನಿಂದ 17.50 ಲಕ್ಷ ಮೌಲ್ಯದ 15 ದ್ವಿಚಕ್ರ ವಾಹನಗಳು ಮತ್ತು ಎರಡು ಆಟೋ ರಿಕ್ಷಾಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನರಸಾಪುರ ಲೇಔಟ್ ನಿವಾಸಿ ಸೈಯದ್ ಇರ್ಫಾನ್ ಎಂದು ಗುರುತಿಸಲಾಗಿದೆ.

ಇರ್ಫಾನ್ ಮನೆಗಳ ಹೊರಗೆ ನಿಲ್ಲಿಸಿದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್‌ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT