ಜಿ. ಪರಮೇಶ್ವರ್ PTI
ರಾಜ್ಯ

ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣ: ಕೋರ್ಟ್ ತಡೆಯಾಜ್ಞೆ ತೆರವಿಗೆ ಅಡ್ವೊಕೇಟ್ ಜನರಲ್‌ಗೆ ಸೂಚನೆ - ಪರಮೇಶ್ವರ್

ಬಿ ಎಸ್ ಯಡಿಯೂರಪ್ಪ ವಿರುದ್ಧದ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ (Pocso) ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವು ಮಾಡುವಂತೆ ಅಡ್ವೊಕೇಟ್ ಜನರಲ್ ಗೆ ಸೂಚಿಸಲಾಗಿದೆ.

ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧದ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ (Pocso) ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವು ಮಾಡುವಂತೆ ಅಡ್ವೊಕೇಟ್ ಜನರಲ್ ಗೆ ಸೂಚಿಸಲಾಗಿದೆ. ಆ ಪ್ರಕ್ರಿಯೆ ಮುಗಿದ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆಗೆ (CID) ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಈ ಹಿಂದೆ ಮಧ್ಯಂತರ ಆದೇಶ ನೀಡಿತ್ತು.

ಫೆಬ್ರವರಿ 2ರಂದು ಇಲ್ಲಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮಾರ್ಚ್ 14 ರಂದು ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಸಿಐಡಿ ಜೂನ್ 27ರಂದು ಯಡಿಯೂರಪ್ಪ ವಿರುದ್ಧ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಯಡಿಯೂರಪ್ಪ ಸೇರಿದಂತೆ ವಿಪಕ್ಷ ನಾಯಕರು ಭಾಗಿಯಾಗಿರುವ ಹಗರಣಗಳು ಅಥವಾ ಪ್ರಕರಣಗಳನ್ನು ಬಯಲಿಗೆಳೆದು ತನಿಖಾ ವರದಿಗಳ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಹೇಳಿದ್ದರು.

ಯಡಿಯೂರಪ್ಪ ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಪ್ರಕರಣದಲ್ಲಿ ಆರೋಪಿಯಾಗಿರುವುದರಿಂದ ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ 81ರ ಹರೆಯದ ಮಾಜಿ ಮುಖ್ಯಮಂತ್ರಿ ಪ್ರಕರಣದ ಕುರಿತು ನ್ಯಾಯಾಲಯ ತೀರ್ಪು ನೀಡಿದಾಗ ಸತ್ಯ ಹೊರಬರಲಿದ್ದು ಮುಖ್ಯಮಂತ್ರಿಗೆ ತಕ್ಕ ಉತ್ತರ ಸಿಗಲಿದೆ ಎಂದು ಹೇಳಿದ್ದರು.

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಕುರಿತು ಕೇಳಿದ ಪ್ರಶ್ನೆಗೆ, ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT