ಸಿಎಂ ಸಿದ್ದರಾಮಯ್ಯ, ಟಿ.ಜೆ. ಅಬ್ರಹಾಂ  
ರಾಜ್ಯ

Muda scam: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​'ಗೆ ರಾಜ್ಯಪಾಲರಿಂದ ವಿಳಂಬ ನೀತಿ; ಕೋರ್ಟ್ ಮೆಟ್ಟಿಲೇರಲು ಟಿಜೆ ಅಬ್ರಹಾಂ ಮುಂದು!

ಇದೀಗ ನಾನು ವಕೀಲರೊಂದಿಗೆ ಚರ್ಚೆ ನಡೆಸಿದ್ದು, ಜನಪ್ರತಿನಿಧಿಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಅಥವಾ ಹೈಕೋರ್ಟ್‌ನಲ್ಲಿ ವಿಶೇಷ ಮೊಕದ್ದಮೆ ಹೂಡಲು ಚಿಂತನೆ ನಡೆಸುತ್ತಿದ್ದೇನೆ.

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​'ಗೆ ಅನುಮತಿ ನೀಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟಿಜೆ ಅಬ್ರಹಾಂ ಅವರು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಜುಲೈ 26 ರಂದು ಮಂಜೂರಾತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದು, ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ನಲ್ಲಿ ಸಿಎಂ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದು ಎಂಬುದು ಮೇಲ್ನೋಟಕ್ಕೆ ತೋರುತ್ತಿದೆ ಎಂದು ರಾಜ್ಯಪಾಲರು ತಿಳಿಸಿದ್ದರು. ಆದರೂ, ಪ್ರಾಸಿಕ್ಯೂಷನ್​'ಗೆ ವಿಳಂಬ ನೀತಿ ಅನುಸರಿಸುತ್ತಿರುವುದೇಕೆ ಎಂಬುದು ತಿಳಿಯುತ್ತಿಲ್ಲ ಎಂದು ಅಬ್ರಹಾಂ ಅವರು ಹೇಳಿದ್ದಾರೆ.

ಇದೀಗ ನಾನು ವಕೀಲರೊಂದಿಗೆ ಚರ್ಚೆ ನಡೆಸಿದ್ದು, ಜನಪ್ರತಿನಿಧಿಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಅಥವಾ ಹೈಕೋರ್ಟ್‌ನಲ್ಲಿ ವಿಶೇಷ ಮೊಕದ್ದಮೆ ಹೂಡಲು ಚಿಂತನೆ ನಡೆಸುತ್ತಿದ್ದೇನೆಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್​'ಗೆ ಅನುಮತಿ ತೋಕಿ ನಾನು ಮನವಿ ಸಲ್ಲಿಸಿದ್ದೆ. ಆದರೆ, ಮನವಿಯನ್ನು ತಿರಸ್ಕರಿಸಿದ್ದರು. ಆದರೆ, ಈ ಕ್ರಮ ಸರಿಯಲ್ಲ ಎಂದು ಕೋರ್ಟ್ ಮೆಟ್ಟಿಲೇರಿದ್ದೆ. ಇದೀಗ ಮುಡಾ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದೇನೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನಾನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧವೂ ಹೋರಾಟ ನಡೆಸಿದ್ದೆ, ಈ ಪ್ರಕರಣದಲ್ಲಿ ಎಸ್‌ಐಟಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಕೋರಿತ್ತು ಎಂದು ಹೇಳಿದ್ದಾರೆ. ಏತನ್ಮಧ್ಯೆ, ಪ್ರವಾಸದಲ್ಲಿರುವ ರಾಜ್ಯಪಾಲ ಗೆಹ್ಲೋಟ್ ಅವರಕು ಭಾನುವಾರ ಸಂಜೆ ರಾಜಭವನಕ್ಕೆ ಮರಳಲಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT