ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು-ಧಾರವಾಡ KIADB ಕಚೇರಿ ಮೇಲೆ ಇಡಿ ದಾಳಿ: ಭೂ ಸ್ವಾಧೀನ ನೆಪದಲ್ಲಿ ಕೋಟಿ ಕೋಟಿ ಲೂಟಿ ಪತ್ತೆ!

ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರ ನೀಡುವ ನೆಪದಲ್ಲಿ ಹಣಕಾಸಿನ ಅಕ್ರಮ, ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಓಪನ್‌ ಮಾಡಿ ಕಾಸು ಲಪಟಾಯಿಸಿರುವುದು ಕಂಡುಬಂದಿತ್ತು.

ಬೆಂಗಳೂರು: ಬೆಂಗಳೂರು ಮತ್ತು ಧಾರವಾಡದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಗಳ ಮೇಲೆ ಶುಕ್ರವಾರ ನಡೆಸಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ, ಶನಿವಾರವೂ ಮುಂದುವರೆದಿತ್ತು.

ಭೂ ಸ್ವಾಧೀನ ಹೆಸರಲ್ಲಿ ಕೆಐಇಡಿಬಿ ಅಧಿಕಾರಿಗಳು ನೂರಾರು ಕೋಟಿ ಲೂಟಿ ಮಾಡಿದ ಆರೋಪ ಕೇಳಿಬಂದಿತ್ತು. ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರ ನೀಡುವ ನೆಪದಲ್ಲಿ ಹಣಕಾಸಿನ ಅಕ್ರಮ, ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಓಪನ್‌ ಮಾಡಿ ಕಾಸು ಲಪಟಾಯಿಸಿರುವುದು ಕಂಡುಬಂದಿತ್ತು.

IDBI ಬ್ಯಾಂಕ್‌ನ ಒಂದೇ ಶಾಖೆಯಲ್ಲಿ 24 ನಕಲಿ ಖಾತೆಗಳನ್ನು ತೆರೆದು ಹಣ ಕಳುಹಿಸಲಾಗಿತ್ತು. ಹುಬ್ಬಳ್ಳಿ ವಿಮಾನ ನಿಲ್ದಾಣದ ಭೂ ಸ್ವಾಧೀನದ ಹೆಸರಲ್ಲಿ, ಧಾರವಾಡ ಕೆಲಗೇರಿ ಹಾಗು ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿಯೂ ಲೂಟಿ ಮಾಡಿರುವುದು ಕಂಡು ಬಂದಿತ್ತು.

ಆರೋಪ ಹಿನ್ನೆಲೆಯಲ್ಲಿ ಆರ್ ಆರ್ ನಗರದಲ್ಲಿರುವ ಟೆಂಪಲ್ ಬೆಲ್ ಅಪಾರ್ಟ್ಮೆಂಟ್ ನಲ್ಲಿ ವಾಸವಿರುವ ವಾಣಿ ನಿವಾಸ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದರು. ಬಳಿಕ ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಪ್ರಧಾನ ಕಚೇರಿ ಮೇಲೂ ದಾಳಿ ನಡೆಸಿತು. ಇದರ ಬೆನ್ನಲ್ಲೇ ಶನಿವಾರ ಕೆಐಎಡಿಬಿಯ ಧಾರವಾಡ ಕಚೇರಿಯ ಮೇಲೂ ದಾಳಿ ನಡೆಸಿದ ಅಧಿಕಾರಿಗಳು ದಾಖಲೆ ಹಾಗೂ ಕಡತಗಳನ್ನು ಪರಿಶೀಲನೆ ನಡೆಸಿದರು.

ಮೂಲಗಳ ಪ್ರಕಾರ, ಧಾರವಾಡದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಆರೋಪಕ್ಕೆ ಸಂಬಂಧಿಸಿದಂತೆ 2022 ಮತ್ತು 2023 ರಲ್ಲಿಯೇ ಧಾರವಾಡದಲ್ಲಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿದ್ದು, ನಾಲ್ಕರ ಪೈಕಿ ಒಂದು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು, ಉಳಿದ ಪ್ರಕರಣಗಳನ್ನು ಸ್ಥಳೀಯ ಪೊಲೀಸರ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT