ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ. 
ರಾಜ್ಯ

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ 'ಸಂಘಟಿತ ದಾಳಿ': ನೀರಜ್ ಪಾಟೀಲ್ ಖಂಡನೆ, ಕ್ರಮಕ್ಕೆ ಆಗ್ರಹ

ಬೆಂಗಳೂರಿಗೆ ಭೇಟ ನೀಡಿರುವ ನೀರಜ್ ಪಾಟೀಲ್ ಅವರು ವಿದೇಶಾಂಗ ಕಚೇರಿಗೆ ಪತ್ರ ಬರೆದಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರು: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಸಂಘಟಿತ ದಾಳಿಗೆ ಬ್ರಿಟನ್‌ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿರುವ ಡಾ.ನೀರಜ್ ಪಾಟೀಲ್ ಅವರು ಖಂಡನೆ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರಿಗೆ ಭೇಟ ನೀಡಿರುವ ನೀರಜ್ ಪಾಟೀಲ್ ಅವರು ವಿದೇಶಾಂಗ ಕಚೇರಿಗೆ ಪತ್ರ ಬರೆದಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾ ಅವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವಂತೆಯೂ ಒತ್ತಾಯಿಸಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರಿಗೂ ಪತ್ರ ಬರೆದು ಬಾಂಗ್ಲಾದೇಶದಲ್ಲಿರುವ ಶೇ.8ರಷ್ಟು ಹಿಂದೂ ಅಲ್ಪಸಂಖ್ಯಾತರು ಮತ್ತು ಇತರೆ ಜನಾಂಗದ ಜನರಿಗೂ ಸುರಕ್ಷತೆ ಖಚಿತಪಡಿಸುವಂತೆ ಒತ್ತಾಯಿಸಲಾಗಿದೆ ಎಂದು ನೀರಜ್ ಪಾಟೀಲ್ ಅವರು ಹೇಳಿದ್ದಾರೆ.

ಈ ಹಿಂದೆ ಬ್ರಿಟನ್ ಸರ್ಕಾರ ಶೇಖ್ ಹಸೀನಾ ಅವರಿಗೆ ಆಶ್ರಯ ನೀಡಲು ನಿರಾಕರಿಸಿದ್ದು, ಆದರೆ, ಹಿಂದೂಸ್ ಫಾರ್ ಲೇಬರ್ ಸದಸ್ಯರು, ಶೇಖ್ ಹಸೀನಾ ಆವರಿಗೆ ಆಶ್ರಯ ನೀಡುವುದು ಬಾಂಗ್ಲಾದೇಶದಲ್ಲಿ ಹಿಂದೂಗಳ ಸುರಕ್ಷತೆಯನ್ನು ಹೆಚ್ಚಿಸುತ್ತದೆ ಎಂದು ಸಲಹೆ ನೀಡಿದ್ದರು.

ಹಸೀನಾ ಅವರ ಸಹೋದರಿ ಶೇಖ್ ರೆಹಾನಾ ಅವರು ಬ್ರಿಟಿಷ್ ಪ್ರಜೆಯಾಗಿದ್ದು, ಅವರ ಸೋದರ ಸೊಸೆ ಟುಲಿಪ್ ಸಿದ್ದಿಕ್ ಬ್ರಿಟನ್ ನಲ್ಲಿ ಆರ್ಥಿಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

SCROLL FOR NEXT