ಕ್ರೆಸ್ಟ್ ಗೇಟ್ ಕುಸಿತ  
ರಾಜ್ಯ

ತುಂಗಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ಕುಸಿತ: ಸರ್ಕಾರದ ಮೇಲೆ ಬಿಜೆಪಿ ನಾಯಕರ ಆರೋಪಗಳ ಸುರಿಮಳೆ

ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಇಲಾಖೆಗಿಂತ ಪಕ್ಷದ ಹೈಕಮಾಂಡ್‌ಗಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಜನರಿಗಿಂತ ಪಕ್ಷದ ಹಿತವೇ ಮುಖ್ಯವಾಗಿದೆ.

ಬೆಂಗಳೂರು: ತುಂಗಭದ್ರಾ ಅಣೆಕಟ್ಟಿನ ತೂಬು ಗೇಟ್ ಕೊಚ್ಚಿ ಹೋಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು,  ಕಳೆದ ಬಾರಿ ಬರ ಎದುರಿಸಿದ್ದ ರೈತರನ್ನು ಈ ಬಾರಿ ಪ್ರವಾಹಕ್ಕೆ ಸಂಕಷ್ಟಕ್ಕೆ ದೂಡುವ ಸಾಧ್ಯತೆ ನಿಚ್ಛಳವಾಗಿದೆ ಮತ್ತು ನೀರು ಸುಮ್ಮನೆ ನಿಷ್ಪ್ರಯೋಜಕವಾಗಿ ಪೋಲಾಗಿ ಹೋಗುತ್ತಿದೆ ಎಂದು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸರಕಾರದ ನಿರ್ಲಕ್ಷ್ಯದಿಂದ ನೀರು ಪೋಲು ಆಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಇಲಾಖೆಗಿಂತ ಪಕ್ಷದ ಹೈಕಮಾಂಡ್‌ಗಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಜನರಿಗಿಂತ ಪಕ್ಷದ ಹಿತವೇ ಮುಖ್ಯವಾಗಿದೆ ಎಂದು ಆರೋಪಿಸಿದರು.

ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷ ಮತ್ತು ಇತರ ರಾಜ್ಯಗಳಿಗೆ ನಿಧಿ ಸಂಗ್ರಹಿಸುವ ಕೆಲಸದಲ್ಲಿಯೇ ನಿರತರಾಗಿದ್ದಾರೆ. ಇಂತಹ ರಾಜ್ಯದ ಜನತೆಯ ವಿಷಯಗಳು, ರೈತರ ಕಷ್ಟಗಳನ್ನು ಆಲಿಸಲು ಅವರಿಗೆ ಸಮಯ ಹೇಗೆ ಸಿಗುತ್ತದೆ,  ಶಿವಕುಮಾರ್ ಅವರು ಅಣೆಕಟ್ಟೆಯ ತಾಂತ್ರಿಕ ತಂಡದೊಂದಿಗೆ ಸಭೆ ನಡೆಸಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಈ ಅಣೆಕಟ್ಟಿನ ದುರಸ್ತಿಗೆ ಅವರು ತಲೆಕೆಡಿಸಿಕೊಂಡಿಲ್ಲ' ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರೈತರ ಬಗ್ಗೆ ಕಾಳಜಿ ವಹಿಸದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.

ಅಣೆಕಟ್ಟಿನ ಸುತ್ತಮುತ್ತಲಿನ ಹಳ್ಳಿಗಳ ಜನರನ್ನು ಸ್ಥಳಾಂತರಿಸಲು ವ್ಯವಸ್ಥೆ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು. ಪ್ರವಾಹದಂತಹ ಪರಿಸ್ಥಿತಿ ನಿರೀಕ್ಷಿಸಲಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರವು ಹಾನಿಯನ್ನು ಶೀಘ್ರದಲ್ಲಿ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ತುಂಗಭದ್ರಾ ಅಣೆಕಟ್ಟು ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾಗಿದ್ದು, ಕಾಲಾಂತರದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಒಂದು ಪ್ರಮುಖ ಸಮಸ್ಯೆ ಎಂದರೆ ಹೂಳು ಶೇಖರಣೆಯಾಗಿದೆ. ಬಿಜೆಪಿಯ ಅಧಿಕಾರಾವಧಿಯಲ್ಲಿ, ಈ ಸಮಸ್ಯೆಗಳನ್ನು ಪರಿಹರಿಸಲು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಯೋಜನಾ ವರದಿಯನ್ನು ಸಿದ್ಧಪಡಿಸಲಾಯಿತು.

ಕೇಂದ್ರ ಸರ್ಕಾರ ರಚಿಸಿದ್ದ ಅಣೆಕಟ್ಟು ನಿರ್ವಹಣಾ ಸಮಿತಿ ಹಲವು ಶಿಫಾರಸುಗಳನ್ನು ನೀಡಿದೆ. ರಾಜ್ಯ ಸರ್ಕಾರ ಈ ಶಿಫಾರಸುಗಳನ್ನು ಆದ್ಯತೆ ಮೇರೆಗೆ ಜಾರಿಗೊಳಿಸಬೇಕಿತ್ತು. ಆದರೆ ಇಂದಿನ ಸರ್ಕಾರ ಶಿಫಾರಸುಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ, ಪರಿಗಣಿಸಿದ್ದರೆ ಈಗಿನ ಪರಿಸ್ಥಿತಿ ತಪ್ಪಿಸಬಹುದಿತ್ತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT