ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೃಹತ್‌ ಗಾತ್ರದ ಮರದ ಕೊಂಬೆ ಬಿದ್ದು 4 ಮಕ್ಕಳು ಸೇರಿ 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಸಿಎಂ

ಬೆಳಿಗ್ಗೆ 7 ಗಂಟೆಗೆ ಸುಮಾರಿಗೆ ಮಾರುತಿ ಸೇವಾನಗರದಲ್ಲಿ ಘಟನೆ ಸಂಭವಿಸಿದೆ, ಘಟನೆ ವೇಳೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಾಣಿಕ್ಯವೇಲ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ಬೃಹತ್ ಗಾತ್ರದ ಮರದ ಕೊಂಬೆಯೊಂದು ಉರುಳಿಬಿದ್ದು ನಾಲ್ವರು ಮಕ್ಕಳು ಸೇರಿ 6 ಮಂದಿ ಗಾಯಗೊಂಡಿದ್ದಾರೆ.

ಬೆಳಿಗ್ಗೆ 7 ಗಂಟೆಗೆ ಸುಮಾರಿಗೆ ಮಾರುತಿ ಸೇವಾನಗರದಲ್ಲಿ ಘಟನೆ ಸಂಭವಿಸಿದೆ. ಘಟನೆ ವೇಳೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಾಣಿಕ್ಯವೇಲ್ ಎಂಬುವವರಿಗೆ ಗಂಭೀರವಾದ ಗಾಯಗಳಾಗಿವೆ.

ಗಾಯಗೊಂಡಿರುವ ಮತ್ತೋರ್ವರನ್ನು ವಿಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಮಹಿಳೆ ತೊಡೆಯ ಮೂಳೆ ಮುರಿತಕ್ಕೆ ಒಳಗಾಗಿದ್ದಾರೆಂದು ವರದಿಗಳು ತಿಳಿಸಿವೆ.

ಘಟನೆಯಲ್ಲಿ ನಾಲ್ವರು ಶಾಲಾ ಮಕ್ಕಳಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಬಾಣಸವಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿಲ್ಲ, ಗಾಯಗಳ ಸ್ವರೂಪ ತೀವ್ರವಾಗಿಲ್ಲದಿರುವುದರಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಾಧಿಕಾರಿ ತ್ರಿಜಾ ಮಾಹಿತಿ ನೀಡಿದ್ದಾರೆ.

ವಿಜಯಲಕ್ಷ್ಮಿಅವರು ಇಬ್ಬರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮರದ ಕೊಂಬೆ ಬಿದ್ದಿದೆ. ಈ ವೇಳೆ ಮಹಿಳೆಯ ಬಲ ತೊಡೆಯ ಮೂಳೆ ಮುರಿತಗೊಂಡಿದೆ. ಆದರೆ, ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇತರೆ ಇಬ್ಬರು ಮಕ್ಕಳಿಗೂ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಗಾಯಾಗಳುಗಳ ಸಂಬಂಧಿಕರೊಂದಿಗೂ ಮಾತುಕತೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಮಳೆ ಬಂದಾಗ ನಾನು ಒಂದು ಗಮನಿಸಿದ್ದೀನಿ. ಬೆಂಗಳೂರಿನಲ್ಲಿ ಎಷ್ಟೇ ರಸ್ತೆ ಗುಂಡಿ ಮುಚ್ಚಿದ್ದರೂ ಮತ್ತೆ ಸೃಷ್ಟಿ ಆಗುತ್ತಲೇ ಇರುತ್ತದೆ. ರಸ್ತೆ ಬದಿಗಳಲ್ಲಿ ಇರುವ ರೀಟೈನಿಂಗ್ ವಾಲ್‌ಗಳನ್ನು ಸರಿ ಮಾಡಿಸಲು ಸೂಚನೆ ನೀಡಿದ್ದೇನೆ. ರಸ್ತೆ ಪಕ್ಕ ಫುಟ್‌ಪಾತ್‌ಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಮರ ತೆರವಿಗೆ ಸ್ಥಳೀಯರು ಮನವಿ ಮಾಡಿದ್ದರೂ ತೆರವು ಮಾಡಲಿಲ್ಲ ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಚಾರ ಗಮನಕ್ಕೆ ಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕ್ರಮ ಜರುಗಿಸುತ್ತೇವೆ. ಗಾಯಾಳುಗಳ ಎಲ್ಲ ಖರ್ಚು ವೆಚ್ಚಗಳನ್ನು ಬಿಬಿಎಂಪಿ ನಿರ್ವಹಿಸಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT