ಚರಂಡಿಗಳ ಪರಿಶೀಲನೆ ನಡೆಸುತ್ತಿರುವ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್. Photo | Express
ರಾಜ್ಯ

ಬೆಂಗಳೂರಿನಲ್ಲಿ ಮಳೆ ಅವಾಂತರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಡಿಕೆಶಿ ಗರಂ, ಚರಂಡಿಗಳಲ್ಲಿನ ತ್ಯಾಜ್ಯ ತೆರವಿಗೆ ಸೂಚನೆ

ಡಿಕೆ.ಶಿವಕುಮಾರ್ ಅವರು ಹೆಬ್ಬಾಳ ಸಮೀಪದ ಯೋಗೇಶ್ವರನಗರ, ನಾಗವಾರ ಜಂಕ್ಷನ್, ಎಚ್‌ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಆಸ್ಪತ್ರೆ ಜಂಕ್ಷನ್ ಸೇರಿದಂತೆ ಇತರೆಡೆ ಪರಿಶೀಲನೆ ನಡೆಸಿದರು.

ಬೆಂಗಳೂರು: ಚರಂಡಿಗಳಲ್ಲಿ ಹೂಳು ತೆಗೆಯುವಲ್ಲಿ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಅಧಿಕಾರಿಗಳನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡರು.

ಭಾನುವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ನಗರದ ಹಲವು ರಸ್ತೆಗಳು ಜಲಾವೃತ್ತಗೊಂಡಿದ್ದವು. ಈ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿದ ಡಿಕೆ.ಶಿವಕುಮಾರ್ ಅವರು, ಪ್ರಮುಖ ರಸ್ತೆಗಳ ಬದಿಯಲ್ಲಿರುವ ಚರಂಡಿಗಳಿ ಸ್ಥಿತಿ ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು.

ಡಿಕೆ.ಶಿವಕುಮಾರ್ ಅವರು ಹೆಬ್ಬಾಳ ಸಮೀಪದ ಯೋಗೇಶ್ವರನಗರ, ನಾಗವಾರ ಜಂಕ್ಷನ್, ಎಚ್‌ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಆಸ್ಪತ್ರೆ ಜಂಕ್ಷನ್ ಸೇರಿದಂತೆ ಇತರೆಡೆ ಪರಿಶೀಲನೆ ನಡೆಸಿದರು.

ಯೋಗೇಶ್ವರನಗರ ಮೇಲ್ಸೇತುವೆ ಮೇಲೆ ಮಳೆನೀರು ನಿಂತಿರುವುದು ಕಂಡು ಬಂದಿತು. ಇದೇ ವೇಳೆ ಸ್ಥಳದಲ್ಲಿದ್ದ ಚರಂಡಿಯನ್ನು ಪರಿಶೀಲನೆ ನಡೆಸಿದ ಅವರು, ನೀರು ಮುಕ್ತವಾಗಿ ಹರಿಯದಿರಲು ಕಾರಣವನ್ನು ಪ್ರಶ್ನಿಸಿದರು. ಕಾಮಗಾರಿ ಮುಗಿದರೂ ಕಟ್ಟಡದ ಅವಶೇಷಗಳನ್ನು ಏಕೆ ತೆರವುಗೊಳಿಸಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ, ಕೂಡಲೇ ತೆರವುಗೊಳಿಸುವಂತೆ ಸೂಚಿಸಿದರು.

ಬಳಿಕ ಸುತ್ತಮುತ್ತಲ ಪ್ರದೇಶದಲ್ಲಿ ಸಂಚರಿಸಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗದಂತೆ ತಡೆಯಲು ರಸ್ತೆಗಳ ಎರಡೂ ಬದಿಯಲ್ಲಿರುವ ಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಿಲ್ಕ್ ಬೋರ್ಡ್‌ನಲ್ಲಿ ಎಸ್‌ಡಬ್ಲ್ಯೂಡಿ ಪರಿಶೀಲಿಸಿದ ಉಪಮುಖ್ಯಮಂತ್ರಿಗಳು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಚರಂಡಿಗಳು ಕಿರಿದಾಗಿರುವ ಕಡೆ ವಿಸ್ತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆ ಮುಗಿಸಿದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಪ್ರಮುಖವಾಗಿ ರಸ್ತೆ ಗುಂಡಿಗಳು ಹೆಚ್ಚಾಗಿದ್ದು, ಅವುಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಿದ್ದೇನರೆ. ಅದರ ಜೊತೆಗೆ ರಾಜಕಾಲುವೆಗಳಿಗೆ ರಕ್ಷಣಾ ಗೋಡೆಗಳನ್ನು ನಿರ್ಮಾಣ ಮಾಡಬೇಕಿದ್ದು, ತಕ್ಷಣ ಆ ಕಾರ್ಯವನ್ನೂ ಕೈಗೆತ್ತಿಕೊಳ್ಳುವಂತೆ ತಿಳಿಸಿದ್ದೇನೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡುವವರ ವಿರುದ್ಧ ಕ್ರಮಕ್ಕೆ ನಿರ್ದೇಶಿಸಿದ್ದು, ಚರಂಡಿಗಳಲ್ಲಿನ ಹೂಳು ತೆಗೆಯುವಂತೆಯೂ ಹೇಳಿದ್ದೇನೆಂದು ಹೇಳಿದರು.

ನಗರದಲ್ಲಿ ಒಣಗಿದ ಮರಗಳನ್ನು ತೆರವು ಮಾಡಬೇಕಿದೆ. ಅದಕ್ಕಾಗಿ ಎಲ್ಲೆಲ್ಲಿ ಮರಗಳು ಮತ್ತು ರೆಂಬೆಗಳು ಒಣಗಿವೆ ಎಂಬುದನ್ನು ಪಟ್ಟಿ ಮಾಡಿ, ಅವುಗಳ ತೆರವಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮರಗಳ ತೆರವು ಹಾಗೂ ಪ್ರವಾ ಪರಿಸ್ಥಿತಿ ಉಂಟಾಗದಂತೆ ತಡೆಯಲು ವಿಫಲರಾದ ಅಧಿಕಾರಿಗಳ ಬಗ್ಗೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT