ಸಿದ್ದರಾಮಯ್ಯ  PTI
ರಾಜ್ಯ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿದ ನ್ಯಾಯಾಲಯ

ಇಬ್ಬರು ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಟಿ ಜೆ ಅಬ್ರಹಾಂ ಅವರ ಖಾಸಗಿ ದೂರನ್ನು ಅಂಗೀಕರಿಸುವ ಬಗ್ಗೆ ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪರ್ಯಾಯ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದಾಖಲಾಗಿರುವ ಎರಡು ಖಾಸಗಿ ದೂರುಗಳ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಮುಂದಿನ ಮಂಗಳವಾರಕ್ಕೆ ಮುಂದೂಡಿದೆ.

ಇಬ್ಬರು ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಟಿ ಜೆ ಅಬ್ರಹಾಂ ಅವರ ಖಾಸಗಿ ದೂರನ್ನು ಅಂಗೀಕರಿಸುವ ಬಗ್ಗೆ ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಪ್ರಕರಣವನ್ನು ಆಗಸ್ಟ್ 20ಕ್ಕೆ ಮುಂದೂಡಿದ ನ್ಯಾಯಾಲಯ, ಅಬ್ರಹಾಂ ಅರ್ಜಿಯನ್ನು ಆಗಸ್ಟ್ 21ಕ್ಕೆ ಕೈಗೆತ್ತಿಕೊಳ್ಳಲಿದೆ.

ಮೈಸೂರಿನ ಕೆಸರೂರಿನಲ್ಲಿ ಮೂರು ಎಕರೆ 16 ಗುಂಟೆ ಕೃಷಿ ಭೂಮಿ ಸ್ವಾಧೀನಕ್ಕೆ ಪರ್ಯಾಯವಾಗಿ ಸಿದ್ದರಾಮಯ್ಯ ಅವರ ಪತ್ನಿ ಮೇಲ್ಮಟ್ಟದ ಪ್ರದೇಶದಲ್ಲಿ ನಿವೇಶನ ಪಡೆದಿರುವ ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಸಿದ್ದರಾಮಯ್ಯ ಈ ಆರೋಪಗಳನ್ನು ಆಧಾರ ರಹಿತ ಎಂದು ತಳ್ಳಿ ಹಾಕಿದ್ದಾರೆ.

ಈ ವಿಷಯವಾಗಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕೂಡ ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದು, ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ಏಕೆ ಅನುಮತಿ ನೀಡಬಾರದು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರವಾಗಿ ಮುಖ್ಯಮಂತ್ರಿಗೆ ನೀಡಿದ್ದ ನೋಟಿಸ್ ಅನ್ನು ರಾಜ್ಯಪಾಲರು ಹಿಂಪಡೆಯುವಂತೆ ಒತ್ತಾಯಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?