ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಂದ ಶೋಧ ಕಾರ್ಯ 
ರಾಜ್ಯ

ಶಿರೂರು: ನಾಪತ್ತೆಯಾಗಿದ್ದ ಕೇರಳ ಚಾಲಕನ ಲಾರಿ ಭಾಗಗಳು ಪತ್ತೆ; ಶೋಧ ತಂಡಕ್ಕೆ ಹೊಸ ಭರವಸೆ

ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಗಂಗಾವಳಿ ನದಿಯಲ್ಲಿ ಪರಿಶೀಲಿಸಿದಾಗ ಗ್ಯಾಸ್ ಟ್ಯಾಂಕರ್‌ನ ಸ್ವಲ್ಪ ಭಾಗ ಪತ್ತೆಯಾಗಿದೆ.

ಕಾರವಾರ: ಕಾರವಾರ ಜಿಲ್ಲೆ ಶಿರೂರಿನಲ್ಲಿ ಭೂಕುಸಿತ ಸಂಭವಿಸಿ 29 ದಿನಗಳು ಕಳೆದಿದ್ದು, ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿರುವ ಮೂವರ ಪತ್ತೆ ಮಾಡಲು ಶೋಧ ಕಾರ್ಯವನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ವಿಳಂಬ ಮಾಡಿತ್ತು.

ಕಾರವಾರ ಶಾಸಕ ಸತೀಶ್ ಸೈಲ್ ಸೂಚನೆ ಮೇರೆಗೆ ಇದೀಗ ಮತ್ತೆ ಶೋಧ ಕಾರ್ಯ ಆರಂಭವಾಗಿದ್ದು, ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಗಂಗಾವಳಿ ನದಿಯಲ್ಲಿ ಪರಿಶೀಲಿಸಿದಾಗ ಗ್ಯಾಸ್ ಟ್ಯಾಂಕರ್‌ನ ಸ್ವಲ್ಪ ಭಾಗ ಪತ್ತೆಯಾಗಿದೆ. ಕೇರಳದ ಚಾಲಕ ಅರ್ಜುನ್ ಎಂಬಾತನಿಗೆ ಸೇರಿದ್ದ ಲಾರಿಯನ್ನು ಹೊರ ತೆಗೆಯಲಾಗಿತ್ತು. ಕೇರಳ ಮೂಲದ ಅರ್ಜುನ್, ಶಿರೂರಿನ ಜಗನ್ನಾಥ, ಗಂಗೆಕೊಳ್ಳದ ಲೋಕೇಶ್ ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ, ಆದರೆ ಲಾರಿ ಭಾಗಗಳು ಪತ್ತೆಯಾಗಿರುವುದು ಶೋಧ ತಂಡಕ್ಕೆ ಹೊಸ ಭರವಸೆ ಮೂಡಿಸಿದೆ. ತಂಡವು ಗಂಗಾವಳಿ ನದಿಯ ಮಧ್ಯದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಲಿದೆ.

ನಾಪತ್ತೆಯಾದವರ ಪತ್ತೆಗೆ ಒತ್ತಡ ಹೆಚ್ಚಿದ್ದು, ಭರವಸೆಯಂತೆ ಜಿಲ್ಲಾಡಳಿತ ಮತ್ತೆ ಶೋಧ ಕಾರ್ಯ ಆರಂಭಿಸಿದೆ. ಅದರಂತೆ ಎನ್‌ಡಿಆರ್‌ಎಫ್, ಜಿಲ್ಲಾಡಳಿತ ಮತ್ತು ಭಾರತೀಯ ನೌಕಾಪಡೆ ಜಂಟಿಯಾಗಿ ಶೋಧ ಕಾರ್ಯದಲ್ಲಿ ಭಾಗಿಯಾಗಲಿವೆ. ನೌಕಾಪಡೆಯ ಅಧಿಕಾರಿಗಳು ರಾಡಾರ್ ಮತ್ತು ಇತರ ಅತ್ಯಾಧುನಿಕ ಉಪಕರಣಗಳನ್ನು ಬಳಸಿಕೊಂಡು ಶೋಧ ಕಾರ್ಯಾಚರಣೆಯನ್ನು ನಡೆಸಿದರೆ, ಡೈವರ್‌ಗಳು ನಾಪತ್ತೆಯಾದ ಮೂವರಿಗಾಗಿ ನೀರೊಳಗೆ ಮುಳುಗಿ ಶೋಧ ನಡೆಸಲಿದ್ದಾರೆ. ಜಿಲ್ಲಾಡಳಿತದ ಪ್ರಕಾರ ಭೂಕುಸಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ, ಆದರೆ ಇದುವರೆಗೆ 8 ಶವಗಳು ಮಾತ್ರ ಪತ್ತೆಯಾಗಿವೆ. ಕೇರಳ ಸರ್ಕಾರ ಮತ್ತು ಮಾಧ್ಯಮಗಳು ಶೋಧ ಕಾರ್ಯಾಚರಣೆಗೆ ಮುಂದಾಗುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT