ಅರುಣ್ ಯೋಗಿರಾಜ್ online desk
ರಾಜ್ಯ

ಶಿಲ್ಪಿ ಅರುಣ್ ಯೋಗಿರಾಜ್ ಗೆ ಅಮೇರಿಕ ವೀಸಾ ನಿರಾಕರಣೆ!

ನಿಬಂಧನೆಗಳನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಅರುಣ್ ಯೋಗಿರಾಜ್ ಗೆ ವೀಸಾ ನಿರಾಕರಣೆ ಮಾಡಲಾಗಿದೆ.

ಬೆಂಗಳೂರು: ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಗೆ ಅಮೇರಿಕಾ ವೀಸಾ ನಿರಾಕರಿಸಿದೆ.

AKKA ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕೆ ಅರುಣ್ ಯೋಗಿರಾಜ್ ಅಮೇರಿಕಾಗೆ ತೆರಳುವವರಿದ್ದರು. ಈ ಹಿನ್ನೆಲೆಯಲ್ಲಿ ಅರುಣ್ ಯೋಗಿರಾಜ್ ವೀಸಾಗೆ ಅರ್ಜಿ ಸಲ್ಲಿಸಿದ್ದರು.

ನಿಬಂಧನೆಗಳನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಅರುಣ್ ಯೋಗಿರಾಜ್ ಗೆ ವೀಸಾ ನಿರಾಕರಣೆ ಮಾಡಲಾಗಿದೆ.

ಅಯೋಧ್ಯೆ ಮಂದಿರದ ಬಾಲ ರಾಮ ಪ್ರತಿಮೆ, ಇಂಡಿಯಾ ಗೇಟ್ ಬಳಿ ಇರುವ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸೇರಿ ಹಲವು ಪ್ರತಿಮೆಗಳನ್ನು ಕೆತ್ತನೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರ ಪ್ರತಿಭೆ ಮತ್ತು ಕೊಡುಗೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗಿದೆ.

ಅಮೆರಿಕದ ಕನ್ನಡ ಕೂಟಗಳ ಸಂಘ, ವಿಶ್ವ ಕನ್ನಡ ಸಮ್ಮೇಳನ-2024 ಕಾರ್ಯಕ್ರಮ ವರ್ಜೀನಿಯಾದ ರಿಚ್ಮಂಡ್ನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಯೋಗಿರಾಜ್ ಮತ್ತು ಅವರ ಕುಟುಂಬಸ್ಥರನ್ನು ಆಹ್ವಾನಿಸಲಾಗಿತ್ತು. ವೀಸಾ ಅರ್ಜಿಯನ್ನು ತಿರಸ್ಕರಿಸಿರುವ ಅಮೆರಿಕ ರಾಯಭಾರ ಕಚೇರಿ ಇದುವರೆಗೆ ಯಾವುದೇ ಕಾರಣವನ್ನು ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!