ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಗ್ಯಾರಂಟಿಗಳ 'ದುರುಪಯೋಗ' ಕುರಿತ ದೂರುಗಳ ಪರಿಶೀಲನೆ: ಡಿಸಿಎಂ ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಸ್ಥಗಿತ ಅಥವಾ ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಅಥವಾ ರದ್ದುಗೊಳಿಸುವುದಿಲ್ಲ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳ 'ದುರಪಯೋಗ' ಕುರಿತ ದೂರುಗಳು ಕೇಳಿಬಂದಿದ್ದು, ಅವುಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಾಯ ಹೆಚ್ಚಳ ಇರುವವರು ಗ್ಯಾರಂಟಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳಿವೆ. ಅವುಗಳನ್ನು ನಾವು ಮತ್ತೊಮ್ಮೆ ಪರಿಶೀಲನೆ ಮಾಡುತ್ತೇವೆ. ಶಾಸಕರಿಗೆ, ಸಚಿವರಿಗೆ ಅನುದಾನ ಸಿಗುತ್ತಿಲ್ಲ ಎನ್ನುವ ಆರೋಪವೆಲ್ಲ ಸುಳ್ಳು ಎಂದರು.

ಗ್ಯಾರಂಟಿ ಯೋಜನೆಗಳ ಸ್ಥಗಿತ ಅಥವಾ ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಅಥವಾ ರದ್ದುಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.

ಇಂದು ಬೆಳಗ್ಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ, ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು.ಇದರಿಂದಾಗಿ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT