ಎಚ್. ವಿಶ್ವನಾಥ್ 
ರಾಜ್ಯ

ನನ್ನ ವಿರುದ್ಧ ಭೈರತಿ ಸುರೇಶ್ 50 ಕೋಟಿ ರು. ಮಾನನಷ್ಟ ಮೊಕದ್ದಮೆ: ಹೆಚ್.ವಿಶ್ವನಾಥ್‌

ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ತನಿಖೆ ಮಾಡುತ್ತೇವೆ ಎಂದು ಹೇಳಿದರು. ಏನಾಯ್ತು ಈಗ? ಬೈರತಿ ಸುರೇಶ್ ಮುಡಾ ಪ್ರಾಧಿಕಾರಕ್ಕೆ ಬಂದು ಹೋದ ಮೇಲೂ ಮುಡಾದಲ್ಲಿ 500 ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮೈಸೂರು: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನನ್ನ ವಿರುದ್ಧ 50 ಕೋಟಿ ರೂ ಮಾನನಷ್ಟ ಮೊಕದ್ದಮೆ ಕೇಸ್ ಹಾಕಿದ್ದಾರೆ. ಈ ಕುರಿತು ನನಗೆ ನೋಟಿಸ್ ಬಂದಿದೆ. ನಾನೂ ಲಾಯರ್ ಆಗಿದ್ದವನು. ಇದಕ್ಕೆಲ್ಲ ಉತ್ತರ ನೀಡುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ತನಿಖೆ ಮಾಡುತ್ತೇವೆ ಎಂದು ಹೇಳಿದರು. ಏನಾಯ್ತು ಈಗ? ಬೈರತಿ ಸುರೇಶ್ ಮುಡಾ ಪ್ರಾಧಿಕಾರಕ್ಕೆ ಬಂದು ಹೋದ ಮೇಲೂ ಮುಡಾದಲ್ಲಿ 500 ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಜನಾಂದೋಲನ, ಮೈತ್ರಿ ಪಕ್ಷದ ಪಾದಯಾತ್ರೆ ಸಮಾವೇಶ ಕುರಿತು ಪ್ರತಿಕ್ರಿಯಿಸಿ, ಸಮಾವೇಶ, ಪಾದಯಾತ್ರೆ ಮೂಲಕ ರಾಜ್ಯದ ಜನತೆಗೆ ಯಾವ ಸಂದೇಶ ನೀಡಿಲ್ಲ. ಸಮಾವೇಶದುದ್ದಕ್ಕೂ ಪರಸ್ಪರ ಬೈದಾಡಿಕೊಂಡಿದ್ದೀರಿ. ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆದರೂ ಜನ ಸಾಮಾನ್ಯರಿಗೆ ಒಂದು ನಿವೇಶನ ಹಂಚಿಕೆ ಮಾಡಲು ಆಗಲಿಲ್ಲ. ಮುಡಾದಲ್ಲಿ 86 ಸಾವಿರ ಜನ ಅರ್ಜಿ ಹಾಕಿದ್ದಾರೆ. ಜನರಿಗೆ ಸೈಟ್‌ ಕೊಡುವುದನ್ನು ಬಿಟ್ಟು, ಸಿದ್ದರಾಮಯ್ಯ ತನ್ನ ಹೆಂಡತಿ ಹೆಸರಿನಲ್ಲಿ ಸೈಟ್‌ ಪಡೆದಿದ್ದಾರೆ. ಹೀಗೆ ಪಡೆದ ಬದಲಿ ನಿವೇಶನಗಳನ್ನು ಮೊದಲು ವಾಪಸ್‌ ನೀಡಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಆ ಕೆಲಸ ಮಾಡುವುದು ಬಿಟ್ಟು, ಚಾಮುಂಡಿ ಬೆಟ್ಟಕ್ಕೆ ಪ್ರಾಧಿಕಾರ ರಚನೆ ಸೇರಿದಂತೆ ಅರಮನೆ ವಿಚಾರಕ್ಕೆ ಮುಖ್ಯಮಂತ್ರಿಗಳು ಹೆಚ್ಚಾಗಿ ತಲೆ ಹಾಕುತ್ತಿದ್ದಾರೆ. ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಹಾಗೆಯೇ ಇರಲಿ. ನೀವು ಅಧಿಕಾರಕ್ಕೆ ಬಂದಾಗಲೆಲ್ಲಾ ಅರಮನೆ ವಿಚಾರಕ್ಕೆ ಯಾಕೆ ತಲೆ ಹಾಕುತ್ತೀರಿ ಎಂದು ಪ್ರಶ್ನಿಸಿದರು. ಚಾಮುಂಡಿ ಬೆಟ್ಟವನ್ನು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೋಲಿಸಲು ಸಾಧ್ಯವಿಲ್ಲ ಎಂದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಅವರು ಈ ಹಿಂದೆ ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿಯೂ ಅರಮನೆ ವಿಚಾರದಲ್ಲಿ ಮೂಗು ತೂರಿಸಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT