ಬೈಕ್'ಗೆ ಬೆಂಕಿ ಹಚ್ಚಿರುವುದು. 
ರಾಜ್ಯ

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು: ಸಿಟ್ಟಿಗೆದ್ದು ವಿಧಾನಸೌಧ ಮುಂದೆಯೇ ಬೈಕ್'ಗೆ ಬೆಂಕಿ ಹಚ್ಚಿದ ಯುವಕ..!

ಚಿತ್ರದುರ್ಗದ ಚಳ್ಳಕೆರೆ ಮೂಲದ ಯಶವಂತಪುರ ನಿವಾಸಿ ಪೃಥ್ವಿರಾಜ್ ಎಂಬ ಯುವಕ ಬುಧವಾರ ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ.

ಬೆಂಗಳೂರು: ತನ್ನ ತಾಯಿ ನೀಡಿದ ದೂರು ಸ್ವೀಕರಿಸಲು ಉಡಾಫೆ ವರ್ತನೆ ತೋರಿದ ಪೊಲೀಸರ ಮೇಲೆ ಸಿಟ್ಟಿಗೆದ್ದ ಯುವಕನೊಬ್ಬ ವಿಧಾನಸೌಧದ ಮುಂದೆಯೇ ಬೈಕ್'ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ.

ಚಿತ್ರದುರ್ಗದ ಚಳ್ಳಕೆರೆ ಮೂಲದ ಯಶವಂತಪುರ ನಿವಾಸಿ ಪೃಥ್ವಿರಾಜ್ (27) ಎಂಬ ಯುವಕ ಬುಧವಾರ ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ. ಘಟನೆ ವೇಳೆ ಸುತ್ತಮುತ್ತಲಿನ ರಸ್ತೆಯಲ್ಲಿ ದಟ್ಟ ಹೊಗೆ ಆವರಿಸಿದ್ದು, ಇದು ಸ್ಥಳದಲ್ಲಿದ್ದ ಜನರು ಆತಂಕಕ್ಕೊಳಗಾಗುವಂತೆ ಮಾಡಿತ್ತು.

ಬಳಿಕ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆದು, ಬೆಂಕಿ ನಂದಿಸುವಂತೆ ಮಾಡಿದರು. ನಂತರ ಯುವಕನನ್ನು ವಿಧಾನಸೌಧ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಪೃಥ್ವಿರಾಜ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಸ್ನೇಹಿತರೊಂದಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದರು. ಆದರೆ, ಆತನ ತಾಯಿಗೆ ಮಗನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಸಾಧ್ಯವಾಗಿಲ್ಲ. ಇದರಿಂದ ಆತಂಕಕ್ಕೊಳಗಾದ ಅವರು, ಚಳ್ಳಕೆರೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ದಾಖಲಿಸಲು ಮುಂದಾಗಿದ್ದಾರೆ. ಆದರೆ, ಪೊಲೀಸರು ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದು, ಶೀಘ್ರದಲ್ಲೇ ವಾಪಸ್ಸಾಗುತ್ತಾನೆಂದು ಹೇಳಿದ್ದಾರೆ.

ಬಳಿಕ ಮನೆಗೆ ಮರಳಿದ ಮಹಿಳೆ ಪೃಥ್ವಿರಾಜ್ ಮನೆಗೆ ಹಿಂತಿರುಗಿದ ವೇಳೆ ಪೊಲೀಸರ ವರ್ತನೆ ಬಗ್ಗೆ ತಿಳಿಸಿ್ದಾರೆ. ಇದನ್ನು ವಿಚಾರಿಸಲು ಇಬ್ಬರೂ ಮತ್ತೆ ಠಾಣೆಗೆ ಬಂದಿದ್ದು, ಈ ವೇಳೆಯೂ ಪೊಲೀಸರು ನಿಂದಿಸಿದ್ದರು ಎನ್ನಲಾಗಿದೆ.

ತಾಯಿ ಮುಂದೆ ತನ್ನನ್ನ ನಿಂದಿಸಿದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಪೃಥ್ವಿರಾಜ್ ಪೊಲೀಸರ ಮೇಲಿದ್ದ ಸಿಟ್ಟಿಗೆ ವಿಧಾನಸೌಧದ ಮುಂದೆ ತನ್ನ ಬೈಕ್ ನಿಲ್ಲಿಸಿ, ತನಗೆ ನ್ಯಾಯ ಸಿಕ್ಕಿಲ್ಲ ಎಂದು ಬೆಂಕಿ ಹಚ್ಚಿಸಿದ್ದಾರೆ. ಇದೀಗ ಪೃಥ್ವಿರಾಜ್ ವಿರುದ್ಧ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT