ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನಟ ಚೇತನ್. 
ರಾಜ್ಯ

PSI ಪರಶುರಾಮ್ ಸಾವು ಪ್ರಕರಣ: CID ಮೇಲೆ ನಂಬಿಕೆಯಿಲ್ಲ CBI ಗೆ ಹಸ್ತಾಂತರಿಸಿ; ನಟ ಚೇತನ್ ಆಗ್ರಹ

ಯಾದಗಿರಿ ಶಾಸಕ ಕಾಂಗ್ರೆಸ್ ಪಕ್ಷದವರಾಗಿರುವುದರಿಂದ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಾವು ಸಿಐಡಿ ತನಿಖೆಯನ್ನು ನಂಬುವುದಿಲ್ಲ. ಸಿಬಿಐ ತನಿಖೆಗೆ ವಹಿಸಬೇಕು...

ಕಲಬುರಗಿ: ಯಾದಗಿರಿ ನಗರ ಠಾಣೆಯ ಮೃತ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ನಟ ಚೇತನ್ ಅಹಿಂಸಾ ಅವರು ಆಗ್ರಹಿಸಿದ್ದಾರೆ.

ಪರಶುರಾಮ್ ಅವರ ಸಹೋದರ ಹನುಮಂತ್ ಅವರ ನೇತೃತ್ವದಲ್ಲಿ ನಿನ್ನೆಯಷ್ಟೇ ಯಾದಗಿರಿಯಲ್ಲಿ ಬೃಹತ್ ಸಮಾವೇಶ ನಡೆಯಿತು.

ಯಾದಗಿರಿ ನಗರದ ಮೈಲಾಪುರ ಅಗಸಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿ ಚೌಕ್, ಕನಕ ವೃತ್ತ, ಅಂಬೇಡ್ಕರ್ ಚೌಕ್, ಸುಭಾಷ್ ಚಂದ್ರ ಬೋಸ್ ವೃತ್ತದ ಮೂಲಕ ಶಾಸಕರ ಕಚೇರಿ ತಲುಪಿತು. ಸುಭಾಷ್ ಚಂದ್ರ ಬೋಸ್ ವೃತ್ತದ ಬಳಿ ಕೆಲ ನಿಮಿಷಗಳ ಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಟ ಚೇತನ್ ಅಹಿಂಸಾ ಅವರು, ಯಾದಗಿರಿ ಶಾಸಕ ಕಾಂಗ್ರೆಸ್ ಪಕ್ಷದವರಾಗಿರುವುದರಿಂದ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಾವು ಸಿಐಡಿ ತನಿಖೆಯನ್ನು ನಂಬುವುದಿಲ್ಲ. ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಯಾದಗಿರಿ ಶಾಸಕರ ಜೊತೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿದ್ದಾರೆ. ಆದರೂ, ಶಾಸಕರು ಕುಟುಂಬಸ್ಥರೊಂದಿಗೆ ಮಾತನಾಡಿಲ್ಲ. ಘಟನೆ ನಡೆದು ಎರಡು ವಾರ ಕಳೆದರೂ ತನಿಖಾ ಸಂಸ್ಥೆ ಎಫ್‌ಐಆರ್‌ನಲ್ಲಿ ಹೆಸರಿಸಿರುವ ಆರೋಪಿಗಳನ್ನು ಬಂಧಿಸಿಲ್ಲ ಅಥವಾ ವಿಚಾರಣೆ ನಡೆಸಿಲ್ಲ. ಸಿಐಡಿ ಅಧಿಕಾರಿಗಳು ಇದುವರೆಗೆ ಮೃತ ಪಿಎಸ್‌ಐ ಕುಟುಂಬದ ಸದಸ್ಯರಿಂದ ಯಾವುದೇ ಮಾಹಿತಿ ಸಂಗ್ರಹಿಸಿಲ್ಲ ಎಂದು ಹೇಳಿದರು.

ಈ ನಡುವೆ ಪ್ರತಿಭಟನಾ ನಿರತರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT