ರಾಜ್ಯ

ಧ್ವಜ ವಿವಾದಗಳು: ತುಮಕೂರಿನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ; ಹುಬ್ಬಳ್ಳಿಯಲ್ಲಿ ವಲಿ ದರ್ಗಾ ಬೋರ್ಡ್ ಹಾಕಿ ಧ್ವಜಾರೋಹಣ!

78ನೇ ಸ್ವಾತಂತ್ಯ್ರೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರಿನ ಕುಣಿಗಲ್‌ನಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದು ಇದಕ್ಕೆ ಸ್ಥಳೀಯ ಯುವಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದರು.

ತುಮಕೂರು/ಹುಬ್ಬಳ್ಳಿ: 78ನೇ ಸ್ವಾತಂತ್ಯ್ರೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರಿನ ಕುಣಿಗಲ್‌ನಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದು ಇದಕ್ಕೆ ಸ್ಥಳೀಯ ಯುವಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದರು.

ಕುಣಿಗಲ್ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ಈ ಘಟನೆ ನಡೆದಿದೆ. ತಾಲೂಕು ಆಡಳಿತದಿಂದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಕೆಲ ಯುವಕರ ಗುಂಪು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದರು. ಈ ವೇಳೆ ಮತ್ತೊಂದು ಗುಂಪು ಪ್ಯಾಲಿಸ್ತೀನ್ ಬಾವುಟ ಹಾರಿಸಿದರೆ ವಿವಾದಕ್ಕೆ ಕಾರಣವಾಗುತ್ತದೆ ಎಂದು ಬುದ್ದಿ ಹೇಳಿದರು.

ಮತ್ತೊಂದೆಡೆ ಹಳೇ ಹುಬ್ಬಳ್ಳಿಯ ಸರ್ಕಲ್ ನಲ್ಲಿ ಬ್ಯಾರಲ್ ಮೇಲೆ ಹಜರತ್ ಸೈಯದ್ ಫತೇಶಾ ವಲಿ ದರ್ಗಾ ಎಂಬ ಬೋರ್ಡ್ ಹಾಕಿ ಧ್ವಜಾರೋಹಣ ಮಾಡಿರುವಂತಹ ಘಟನೆ ಹಳೇ ಹುಬ್ಬಳ್ಳಿಯ ಸರ್ಕಲ್​ನಲ್ಲಿ ನಡೆದಿದೆ. ಆ ಮೂಲಕ 78ನೇ ಸ್ವಾತಂತ್ರ್ಯ ದಿನಾಚರಣೆ ದಿನವೂ ಹಳೇ ಹುಬ್ಬಳ್ಳಿಯಲ್ಲಿ ವಿವಾದ ಉಂಟಾಗಿದೆ. ಅನುಮತಿ ಇಲ್ಲದೆ ಮುಸ್ಲಿಂರು ಧ್ವಜಾರೋಹಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಶ್ರೀರಾಮಸೇನೆ ಮುಖಂಡರು ಶಾಂತಿ ಕದಡಲು ಯತ್ನಿಸಿದ ಆರೋಪದಡಿ ಹುಬ್ಬಳ್ಳಿ-ಧಾರವಾಡ ಡಿಸಿಪಿ ನಂದಗಾವಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT