ಸರ್ಕಾರಿ ನೌಕರರಿಗೆ ಕೆಂಪು–ಹಳದಿ ಟ್ಯಾಗ್‌ ಕಡ್ಡಾಯ 
ರಾಜ್ಯ

'ಕರ್ನಾಟಕ ನಾಮಕರಣ'ಕ್ಕೆ 50 ವರ್ಷ; ಸರ್ಕಾರಿ ನೌಕರರಿಗೆ ಕೆಂಪು–ಹಳದಿ ಟ್ಯಾಗ್‌ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರವು ತನ್ನ ನೌಕರರ ಗುರುತಿನ ಚೀಟಿಯ ಕೊರಳುದಾರದ (ಟ್ಯಾಗ್‌) ವಿನ್ಯಾಸವನ್ನು ಬದಲಿಸಿದ್ದು, ಕೆಂಪು–ಹಳದಿ ಬಣ್ಣಗಳನ್ನು ಒಳಗೊಂಡಿರುವ ನೂತನ ಕೊರಳುದಾರವನ್ನು ಧರಿಸಬೇಕು.

ಬೆಂಗಳೂರು: ಮೈಸೂರು ಸಂಸ್ಥಾನವು ಕರ್ನಾಟಕ ರಾಜ್ಯ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ ಕೆಂಪು–ಹಳದಿ ಟ್ಯಾಗ್‌ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹೌದು.. ರಾಜ್ಯ ಸರ್ಕಾರವು ತನ್ನ ನೌಕರರ ಗುರುತಿನ ಚೀಟಿಯ ಕೊರಳುದಾರದ (ಟ್ಯಾಗ್‌) ವಿನ್ಯಾಸವನ್ನು ಬದಲಿಸಿದ್ದು, ಕೆಂಪು–ಹಳದಿ ಬಣ್ಣಗಳನ್ನು ಒಳಗೊಂಡಿರುವ ನೂತನ ಕೊರಳುದಾರವನ್ನು ಧರಿಸಬೇಕು ಎಂದು ಸೂಚಿಸಿದೆ.

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿವೆ. ಇದಕ್ಕಾಗಿ ನಡೆಸುತ್ತಿರುವ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ನಾಡ ಧ್ವಜದ ಬಣ್ಣಗಳನ್ನು ಒಳಗೊಂಡ ಟ್ಯಾಗ್‌ ಅನ್ನು ವಿನ್ಯಾಸ ಮಾಡಲಾಗಿದೆ. ಸರ್ಕಾರದ ಎಲ್ಲಾ ನೌಕರರು ಕಡ್ಡಾಯವಾಗಿ ಇದನ್ನು ಧರಿಸಬೇಕು ಎಂದು ರಾಜ್ಯ ಸರ್ಕಾರಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅಂತೆಯೇ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ನಿಗಮ ಮಂಡಳಿಗಳು, ನಿರ್ದೇಶನಾಲಯಗಳು, ಆಯುಕ್ತಾಲಯಗಳು ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ನೂತನ ಟ್ಯಾಗ್‌ ಅನ್ನು ಧರಿಸಬೇಕು. ತಮ್ಮ ಸಿಬ್ಬಂದಿಗೆ ಈ ಟ್ಯಾಗ್‌ ಅನ್ನು ಒದಗಿಸಲು ಸಂಬಂಧಿತ ಇಲಾಖೆಗಳು ಕ್ರಮವಹಿಸಬೇಕು ಎಂದೂ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT