ಎಸ್ಪಿ ನಾರಾಯಣ್ ಅವರೊಂದಿಗೆ ನಾಯಿ 
ರಾಜ್ಯ

ಶಿರೂರು ಭೂಕುಸಿತ: ಅನಾಥ ನಾಯಿಗಳಿಗೆ ಆಸರೆಯಾಗಿ ಮಾನವೀಯತೆ ಮೆರೆದ ಉತ್ತರ ಕನ್ನಡ ಎಸ್ ಪಿ!

ದುರಂತದಿಂದ ಪವಾಡ ರೀತಿಯಲ್ಲಿ ಬದುಕುಳಿದ ಎರಡು ನಾಯಿಗಳು ಭಾರೀ ಮಳೆ ನಡುವೆ ಅವಶೇಷಗಳ ಮೇಲೆ ನಿಂತು ತನ್ನ ಪಾಲಕರಿಗಾಗಿ ಹುಡುಕಾಡುವ ದಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕಾರವಾರ: ಜುಲೈನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡು ಅನಾಥವಾಗಿದ್ದ ನಾಯಿಗಳನ್ನು ಇದೀಗ ಉತ್ತರ ಕನ್ನಡ ಜಿಲ್ಲಾ ಪೊಲೀಸರು ದತ್ತು ತೆಗೆದುಕೊಂಡಿದ್ದಾರೆ.

ಗುಡ್ಡ ಕುಸಿತದಲ್ಲಿ ಹೋಟೆಲ್ ಮಾಲೀಕರಾದ ಲಕ್ಷ್ಮಣ್ ನಾಯ್ಕ್, ಅವರ ಪತ್ನಿ ಶಾಂತಿ, ಪುತ್ರಿ ಆವಂತಿಕಾ ಮತ್ತು ಪುತ್ರ ಸೌರಭ್ ಸಜೀವ ಸಮಾಧಿಯಾಗಿದ್ದರು. ದುರಂತದಿಂದ ಪವಾಡ ರೀತಿಯಲ್ಲಿ ಬದುಕುಳಿದ ಎರಡು ನಾಯಿಗಳು ಭಾರೀ ಮಳೆ ನಡುವೆ ಅವಶೇಷಗಳ ಮೇಲೆ ನಿಂತು ತನ್ನ ಪಾಲಕರಿಗಾಗಿ ಹುಡುಕಾಡುವ ದಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಎಸ್ಪಿ ನಾರಾಯಣ್ ಅವರು ಅವುಗಳನ್ನು ದತ್ತು ಪಡೆಯುವ ಮೂಲಕ ಆಸರೆಯಾಗಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಎಸ್ಪಿ ನಾರಾಯಣ್, “ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಮತ್ತಿತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ನಾಯಿಗಳ ಪಾಲಕರು ಸಾವನ್ನಪ್ಪಿರುವುದು ತಿಳಿಯಿತು. ನಾಯಿಗಳನ್ನು ಲಕ್ಷ್ಮಣ್ ನಾಯ್ಕ್ ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ನಾಯಿಗಳು ಹೋಟೆಲ್ ಬಿಟ್ಟು ಎಲ್ಲಿಯೂ ಬೇರೆ ಕಡೆಗೆ ಹೋಗದಿರುವ ಬಗ್ಗೆ ಅವರ ಸಂಬಂಧಿ ಪುರುಷೋತ್ತಮ್ ನಾಯ್ಕ್ ತಿಳಿಸಿದರು. ಮನೆಯವರ ಅಂತ್ಯ ಸಂಸ್ಕಾರ ಮಾಡಿದ ನಂತರವೂ ನಾಯಿಗಳು ಅಲ್ಲಿಂದ ಬೇರೆ ಕಡೆಗೆ ತೆರಳಿರಲಿಲ್ಲ. ಮತ್ತೆ ಕಾರ್ಯಾಚರಣೆಗೆ ಬಂದಾಗಲೂ ಅವುಗಳನ್ನು ಹೋಟೆಲ್ ಬಳಿ ಮಲಗಿದ್ದವು. ಅವುಗಳ ನಿಯತ್ತು ನನ್ನ ಮನಸ್ಸಿಗೆ ತಾಟಿತ್ತು. ಹೀಗಾಗಿ ದತ್ತು ಪಡೆಯಲು ನಿರ್ಧರಿಸಿದ್ದಾಗಿ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶ್ವಾನ ದಳ ಇರುವುದರಿಂದ ಅವುಗಳನ್ನು ಮೊದಲು ಕೆನಾಲ್ ನಲ್ಲಿ ಇರಿಸಲು ನಿರ್ಧರಿಸಲಾಗಿದೆ. ಪೊಲೀಸರಿಗೆ ನಾಯಿ ತರಬೇತುದಾರರಿದ್ದಾರೆ. ಪಶ್ಚಿಮ ವಲಯದ ಐಜಿಪಿ ಅವರೊಂದಿಗೆ ಮಾತನಾಡಿ ಅನುಮತಿ ಕೋರಿದ್ದೇನೆ. ಪೋಲೀಸ್ ಕ್ವಾರ್ಟರ್ಸ್‌ಗಳ ಕೆನಾಲ್ ಸಿದ್ಧಪಡಿಸಲಿದ್ದು,ಅವುಗಳು ಅಲ್ಲಿಯೇ ಇರಲಿವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!