ಮರ ಬಿದ್ದು ನಜ್ಜುಗುಜ್ಜಾದ ಆಟೋ 
ರಾಜ್ಯ

ಬೆಂಗಳೂರು ಮಳೆ: ಧರೆಗುರುಳಿದ ಮರ, ಆಟೋ ರಿಕ್ಷಾ ಚಾಲಕನ ಬಲಿ!

ಪಾಲಿಕೆ ನಿಯಮಾವಳಿಗಳ ಪ್ರಕಾರ ಸಂತ್ರಸ್ತ ಕುಟುಂಬ ಸದಸ್ಯರಿಗೆ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು ಎಂದು ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಶಿವರುದ್ರಯ್ಯ (49) ಮತಪಟ್ಟವರು. ಇವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಲ್ಲಿಗೆ ಹೋಗುವಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಪಾಲಿಕೆ ನಿಯಮಾವಳಿಗಳ ಪ್ರಕಾರ ಸಂತ್ರಸ್ತ ಕುಟುಂಬ ಸದಸ್ಯರಿಗೆ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ಈ ವರ್ಷ ನಡೆದ ಎರಡನೇ ಘಟನೆ ಇದಾಗಿದೆ. ಆಗಸ್ಟ್ 12 ರಂದು ಸರ್ವಜ್ಞ ನಗರದ ಜೈ ಭಾರತ್ ನಗರದಲ್ಲಿ ಮರವೊಂದು ಬಿದ್ದು ನಾಲ್ವರು ಶಾಲಾ ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದರು. ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ದ್ವಿಚಕ್ರ ವಾಹನ ಸವಾರ ಮಾಣಿಕ್ಯವೇಲ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ವಿಜಯಲಕ್ಷ್ಮಿ ಎಂಬ ಮಹಿಳೆಯ ತೊಡೆಯ ಮೂಳೆ ಮುರಿದಿದ್ದು, ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT