ರಾಜ್ಯ

ಕ್ಷೌರ ಮಾಡಿಸಲು ಹೋದ ಯುವಕನ ಮೇಲೆ ಜಾತಿ ನಿಂದನೆ: ವಾಗ್ಯುದ್ಧ ಬೆಳೆದು ಕೊಲೆಯಲ್ಲಿ ಅಂತ್ಯ!

ಮೃತ ಯಮನೂರಸ್ವಾಮಿ ಅಣ್ಣ ಹನುಮಂತ ಬಂಡಿಹಾಳ ನೀಡಿದ ದೂರಿನ ಮೇಲೆ ಯಲಬುರ್ಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಆರೋಪಿ ಮುತ್ತಣ್ಣ ಹಡಪದನನ್ನು ಬಂಧಿಸಲಾಗಿದೆ.

ಕೊಪ್ಪಳ: ಜಾತಿ ವ್ಯವಸ್ಥೆಯ ಪೆಂಡಭೂತ ಇನ್ನೂ ಹಳ್ಳಿಗಳಲ್ಲಿ ಜೀವಂತವಾಗಿದೆ ಎಂಬುದಕ್ಕೆ ಇಂದು ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ.ಕ್ಷೌರಕ್ಕಾಗಿ ನಡೆದ ವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಸಂಗನಾಳ ಗ್ರಾಮದ 46 ವರ್ಷದ ಮುತ್ತಣ್ಣ ಹಡಪದ ಎಂಬ ವ್ಯಕ್ತಿಯ ಕಟಿಂಗ್ ಶಾಪ್‌ಗೆ ದಲಿತ ಸಮುದಾಯದ 26 ವರ್ಷದ ಯಮನೂರಸ್ವಾಮಿ ಎನ್ನುವ ಯುವಕ ಕ್ಷೌರ ಮಾಡಿಸಲು ಹೋಗಿದ್ದಾನೆ. ನೀನು ದಲಿತ ಕಟ್ಟಿಂಗ್ ಮಾಡುವುದಿಲ್ಲ ಎಂದು ಮುದುಕಪ್ಪ ಹೇಳಿದ್ದಾನೆ.

ಇದರಿಂದ ಕೋಪಗೊಂಡ ಯುವಕ ಮತ್ತು ಕ್ಷೌರಿಕನ ಮಧ್ಯೆ ಮಾತಿಗೆ ಮಾತು ಬೆಳೆದು ಯಮನೂರಸ್ವಾಮಿ ಕೊಲೆಯಲ್ಲಿ ಅಂತ್ಯವಾಗಿದೆ. ಯಮನೂರಸ್ವಾಮಿ ಕಟಿಂಗ್‌ಗೆ ಬಂದಾಗ ಮುತ್ತಣ್ಣ ನಿಂದಿಸಿ, ನಿಮಗೆ ಕಟಿಂಗ್ ಮಾಡೋದ ದೊಡ್ಡ ತ್ರಾಸು, ಅಂತದರೊಳಗ ದುಡ್ಡಿಲ್ಲದ ಹೇಗೆ ಮಾಡಬೇಕು ಎಂದಿದ್ದಾನೆ.

ಅದಕ್ಕೆ ಯಮನೂರಸ್ವಾಮಿ ನಮ್ಮ ಜಾತಿ ಬಗ್ಗೆ ಮಾತನಾಡಬೇಡ. ನಮ್ಮಣ್ಣ ಊರಲ್ಲಿ ಇಲ್ಲ. ಆತ ಬಂದ ಮೇಲೆ ಹಣ ಕೊಡುತ್ತೇನೆ ಮೊದಲು ಕಟಿಂಗ್ ಮಾಡು ಎಂದಿದ್ದಕ್ಕೆ ಮುತ್ತಣ್ಣ ಏಕಾಏಕಿ ಯಮನೂರಸ್ವಾಮಿಯ ಜತೆಗೆ ಜಗಳ ತೆಗೆದಿದ್ದಾನೆ. ಜಾತಿನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಕತ್ತರಿಯಿಂದ ಹೊಟ್ಟೆಗೆ ಚುಚ್ಚಿ ಸಾಯಿಸಿದ್ದಾನೆ ಎಂದು ಮೃತ ಯಮನೂರಸ್ವಾಮಿ ಅಣ್ಣ ಹನುಮಂತ ಬಂಡಿಹಾಳ ನೀಡಿದ ದೂರಿನ ಮೇಲೆ ಯಲಬುರ್ಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಆರೋಪಿ ಮುತ್ತಣ್ಣ ಹಡಪದನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT