ರಾಜ್ಯ

ಕ್ಷೌರ ಮಾಡಿಸಲು ಹೋದ ಯುವಕನ ಮೇಲೆ ಜಾತಿ ನಿಂದನೆ: ವಾಗ್ಯುದ್ಧ ಬೆಳೆದು ಕೊಲೆಯಲ್ಲಿ ಅಂತ್ಯ!

ಮೃತ ಯಮನೂರಸ್ವಾಮಿ ಅಣ್ಣ ಹನುಮಂತ ಬಂಡಿಹಾಳ ನೀಡಿದ ದೂರಿನ ಮೇಲೆ ಯಲಬುರ್ಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಆರೋಪಿ ಮುತ್ತಣ್ಣ ಹಡಪದನನ್ನು ಬಂಧಿಸಲಾಗಿದೆ.

ಕೊಪ್ಪಳ: ಜಾತಿ ವ್ಯವಸ್ಥೆಯ ಪೆಂಡಭೂತ ಇನ್ನೂ ಹಳ್ಳಿಗಳಲ್ಲಿ ಜೀವಂತವಾಗಿದೆ ಎಂಬುದಕ್ಕೆ ಇಂದು ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ.ಕ್ಷೌರಕ್ಕಾಗಿ ನಡೆದ ವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಸಂಗನಾಳ ಗ್ರಾಮದ 46 ವರ್ಷದ ಮುತ್ತಣ್ಣ ಹಡಪದ ಎಂಬ ವ್ಯಕ್ತಿಯ ಕಟಿಂಗ್ ಶಾಪ್‌ಗೆ ದಲಿತ ಸಮುದಾಯದ 26 ವರ್ಷದ ಯಮನೂರಸ್ವಾಮಿ ಎನ್ನುವ ಯುವಕ ಕ್ಷೌರ ಮಾಡಿಸಲು ಹೋಗಿದ್ದಾನೆ. ನೀನು ದಲಿತ ಕಟ್ಟಿಂಗ್ ಮಾಡುವುದಿಲ್ಲ ಎಂದು ಮುದುಕಪ್ಪ ಹೇಳಿದ್ದಾನೆ.

ಇದರಿಂದ ಕೋಪಗೊಂಡ ಯುವಕ ಮತ್ತು ಕ್ಷೌರಿಕನ ಮಧ್ಯೆ ಮಾತಿಗೆ ಮಾತು ಬೆಳೆದು ಯಮನೂರಸ್ವಾಮಿ ಕೊಲೆಯಲ್ಲಿ ಅಂತ್ಯವಾಗಿದೆ. ಯಮನೂರಸ್ವಾಮಿ ಕಟಿಂಗ್‌ಗೆ ಬಂದಾಗ ಮುತ್ತಣ್ಣ ನಿಂದಿಸಿ, ನಿಮಗೆ ಕಟಿಂಗ್ ಮಾಡೋದ ದೊಡ್ಡ ತ್ರಾಸು, ಅಂತದರೊಳಗ ದುಡ್ಡಿಲ್ಲದ ಹೇಗೆ ಮಾಡಬೇಕು ಎಂದಿದ್ದಾನೆ.

ಅದಕ್ಕೆ ಯಮನೂರಸ್ವಾಮಿ ನಮ್ಮ ಜಾತಿ ಬಗ್ಗೆ ಮಾತನಾಡಬೇಡ. ನಮ್ಮಣ್ಣ ಊರಲ್ಲಿ ಇಲ್ಲ. ಆತ ಬಂದ ಮೇಲೆ ಹಣ ಕೊಡುತ್ತೇನೆ ಮೊದಲು ಕಟಿಂಗ್ ಮಾಡು ಎಂದಿದ್ದಕ್ಕೆ ಮುತ್ತಣ್ಣ ಏಕಾಏಕಿ ಯಮನೂರಸ್ವಾಮಿಯ ಜತೆಗೆ ಜಗಳ ತೆಗೆದಿದ್ದಾನೆ. ಜಾತಿನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಕತ್ತರಿಯಿಂದ ಹೊಟ್ಟೆಗೆ ಚುಚ್ಚಿ ಸಾಯಿಸಿದ್ದಾನೆ ಎಂದು ಮೃತ ಯಮನೂರಸ್ವಾಮಿ ಅಣ್ಣ ಹನುಮಂತ ಬಂಡಿಹಾಳ ನೀಡಿದ ದೂರಿನ ಮೇಲೆ ಯಲಬುರ್ಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಆರೋಪಿ ಮುತ್ತಣ್ಣ ಹಡಪದನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ; ರಾಜ್ಯಪಾಲ ಗೆಹ್ಲೋಟ್ ಇಂದೇ ಬೆಂಗಳೂರಿಗೆ ವಾಪಸ್

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT