ಸಂಗ್ರಹ ಚಿತ್ರ 
ರಾಜ್ಯ

ಆಟೋ ಚಾಲಕನ ಸಾವು ಬೆನ್ನಲ್ಲೇ ಎಚ್ಚೆತ್ತ BBMP: ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವು ಕಾರ್ಯಾಚರಣೆ ತೀವ್ರ

ಆಗಸ್ಟ್ 1 ರಿಂದ ಆಗಸ್ಟ್ 17 ರವರೆಗೆ 756 ಮರಗಳು ನೆಲಕ್ಕುರುಳಿರುವ ಹಾಗೂ ಮರದ ಕೊಂಬೆಗಳು ಬಿದ್ದ ಬಗ್ಗೆ ದೂರುಗಳು ದಾಖಲಾಗಿವೆ. ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ ಎಂದು ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಮರ ಬಿದ್ದು ಆಟೋ ಚಾಲಕ ಮೃತಪಟ್ಟ ಘಟನೆ ಬೆನ್ನಲ್ಲೇ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಚ್ಚೆತ್ತುಕೊಂಡಿದ್ದು, ಇದೀಗ ನಗರದಲ್ಲಿನ ರಸ್ತೆ ಬದಿಗಳಲ್ಲಿರುವ ಅಪಾಯಕಾರಿ ಮರಗಳ ತೆರವುಗೊಳಿಸುವ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಆಗಸ್ಟ್ 1 ರಿಂದ ಆಗಸ್ಟ್ 17 ರವರೆಗೆ 756 ಮರಗಳು ನೆಲಕ್ಕುರುಳಿರುವ ಹಾಗೂ ಮರದ ಕೊಂಬೆಗಳು ಬಿದ್ದ ಬಗ್ಗೆ ದೂರುಗಳು ದಾಖಲಾಗಿವೆ. ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ ಎಂದು ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ತೀವ್ರಗೊಳಿಸಿರುವ ಪಾಲಿಕೆಯು, ಪ್ರತಿ ವಲಯದಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದೆ. ಆಗಸ್ಟ್-ಸೆಪ್ಟೆಂಬರ್ ಮಳೆಗಾಲದ ಗರಿಷ್ಠ ಅವಧಿ ಎಂದು ಪರಿಗಣಿಸಲ್ಪಟ್ಟಿರುವುದರಿಂದ ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ಗುರುತಿಸುವ ಚಟುವಟಿಕೆಯನ್ನು ತೀವ್ರಗೊಳಿಸಿದ್ದಾರೆ ಎಂದು ಬಿಎಲ್‌ಜಿ ಸ್ವಾಮಿ ಹೇಳಿದ್ದಾರೆ.

ದುರ್ಬಲ ಮರಗಳ ಬಗ್ಗೆ ಪರಿಶೀಲನೆ ಮತ್ತು ದೂರುಗಳ ಆಧಾರದ ಮೇಲೆ ಬಿಬಿಎಂಪಿ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಕತ್ತರಿಸಿದ ಮರ ಹಾಗೂ ಕೊಂಬೆಗಳನ್ನು ಪಾಲಿಕೆ ನೇಮಿಸಿರುವ ಸಂಸ್ಥೆಗಳು ಸಾಗಣ ಮಾಡುತ್ತಿವೆ. ಈ ಮರಗಳನನ್ನು ಬಿಬಿಎಂಪಿಯ ವ್ಯಾಪ್ತಿಯ ಅರಣ್ಯಾಧಿಕಾರಿಗಳು ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ, ಆಯಾ ವಲಯಗಳಲ್ಲಿನ ಶೆಡ್‌ಗಳಿಗೆ ರವಾನೆ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ,

ಆಟೋ ಚಾಲಕದ ಕುಟುಂಬ ಸದಸ್ಯರಿಗೆ ಪಾಲಿಕೆ ವತಿಯಿಂದ ರೂ.5 ಲಕ್ಷಗಳ ಪರಿಹಾರ ನೀಡಲಾಗಿದೆ. ಅಲ್ಲದೆ, ಆಸ್ಪತ್ರೆಯ ಶುಲ್ಕ ಹಾಗೂ ಶವಸಂಸ್ಕಾರದ ಶುಲ್ಕವನ್ನೂ ಪಾಲಿಕೆಯೇ ಭರಿಸಿದೆ, ಮರ ಬಿದ್ದು ಬೆನ್ನುಮೂಳೆಗೆ ಪೆಟ್ಟಾಗಿರುವ ಮಾಣಿಕ್ಯವೇಲ್ ಹಾಗೂ ತೊಡೆ ಮೂಳೆ ಮುರಿತಕ್ಕೆ ಒಳಗಾಗಿದ್ದ ವಿಜಯಲಕ್ಷ್ಮಿ ಅವರಿಗೂ ಪಾಲಿಕೆ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ನಾಲ್ವರು ಶಾಲಾ ಮಕ್ಕಳ ಪೈಕಿ ಒಂದು ಮಗುವಿಗೆ ಕೈ ಮೂಳೆ ಮುರಿತಕ್ಕೆ ಒಳಗಾಗಿದ್ದು, ಮಗುವಿಗೆ 1 ಲಕ್ಷ ರೂ., ಸಣ್ಣಪುಟ್ಟ ಗಾಯಕ್ಕೊಳಗಾಗಿರುವ ಮೂವರಿಗೆ ಮಕ್ಕಳಿಗೆ ತಲಾ 20 ಸಾವಿರ ರೂ. ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT