ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 
ರಾಜ್ಯ

ವೈದ್ಯರು, ವೈದ್ಯಕೀಯ ಸಿಬ್ಬಂದಿ‌ಗಳ ಸುರಕ್ಷತೆಗಾಗಿ ಆ.20ರಂದು ಸಭೆ: ಸಚಿವ ದಿನೇಶ್ ಗುಂಡೂರಾವ್

ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಎಲ್ಲರಲ್ಲೂ ಆತಂಕ, ಗಾಬರಿಯನ್ನು ಮೂಡಿಸಿದೆ. ವೈದ್ಯರು, ಸಿಬ್ಬಂದಿಯಲ್ಲಿ ಮಹಿಳೆಯರೂ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಾರೆ.

ಮಂಗಳೂರು: ವೈದ್ಯರು, ನರ್ಸ್‌ಗಳು ಮತ್ತು ಇತರ ವೈದ್ಯಕೀಯ ವೃತ್ತಿಪರರ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವ ಕ್ರಮಗಳ ಕುರಿತು ಚರ್ಚಿಸಲು ಆಗಸ್ಟ್ 20 ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದರು,

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಎಲ್ಲರಲ್ಲೂ ಆತಂಕ, ಗಾಬರಿಯನ್ನು ಮೂಡಿಸಿದೆ. ವೈದ್ಯರು, ಸಿಬ್ಬಂದಿಯಲ್ಲಿ ಮಹಿಳೆಯರೂ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಾರೆ. ಇದರಲ್ಲಿ ರಾತ್ರಿಯೂ ಕೆಲಸ ಮಾಡುತ್ತಾರೆ. ಈ ಬಗ್ಗೆ ಎಲ್ಲರೂ ಗಮನಹರಿಸಬೇಕಾಗಿದೆ ಎಂದು ಹೇಳಿದರು.

ವೈದ್ಯರು, ಆಸ್ಪತ್ರೆ ‌ಸಿಬ್ಬಂದಿ ರಾತ್ರಿಯಿಡೀ ಕೆಲಸ ಮಾಡುತ್ತಾರೆ.‌ ಮಹಿಳಾ ಸಿಬ್ಬಂದಿ ಕೂಡ ಇರುತ್ತಾರೆ. ಎಲ್ಲರ ಸುರಕ್ಷತೆಯೂ ಮುಖ್ಯವಾಗಿದೆ. ಸುರಕ್ಷತೆ ಎನ್ನುವುದು ಆಸ್ಪತ್ರೆ ನಡೆಸುವವರ ಜವಾಬ್ದಾರಿಯೂ ಆಗಿದೆ. ಆಸ್ಪತ್ರೆ ವೈದ್ಯರು, ನರ್ಸ್, ಸಿಬ್ಬಂದಿ‌ ಸುರಕ್ಷತೆಗೆ ಚರ್ಚಿಸಲು ಮಂಗಳವಾರ ಎಲ್ಲ‌ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.

ವೈದ್ಯರು, ನರ್ಸ್, ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದ್ದು, ಇದಕ್ಕೆ ರಾಜ್ಯಪಾಲರ ಅಂಕಿತ ಮಾತ್ರ ಬಾಕಿ ಇದೆ. ಈ ತಿದ್ದುಪಡಿಯ ಪ್ರಕಾರ ವೈದ್ಯರಿಗೆ, ನರ್ಸ್​ಗಳಿಗೆ ಯಾರೂ ಬಂದು ಹೆದರಿಸಬಾರದು, ನಿಂದಿಸಬಾರದು. ವಿಡಿಯೋ ಮಾಡುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದನ್ನು ಮಾಡಬಾರದು. ಇದು ಈ ತಿದ್ದುಪಡಿಯಾದ ಕಾಯ್ದೆಯಲ್ಲಿದೆ. ಇದನ್ನು ಎಲ್ಲಾ ವೈದ್ಯರು, ನರ್ಸ್​​ಗಳ ಸುರಕ್ಷತೆಗಾಗಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT