ಎರಡು ಸ್ಕೂಟರ್ ಗಳನ್ನು ಫ್ಲೈ ಓವರ್‌ನಿಂದ ಕೆಳಗೆಸೆದ ದಾರಿಹೋಕರರು 
ರಾಜ್ಯ

ವ್ಹೀಲಿಂಗ್‌ ಹುಚ್ಚಾಟ: ಮೇಲ್ಸೇತುವೆಯಿಂದ ಸ್ಕೂಟರ್ ಎಸೆದವರ ವಿರುದ್ಧ ಪ್ರಕರಣ ದಾಖಲು..!

ಆಗಸ್ಟ್ 15ರಂದು ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.

ಬೆಂಗಳೂರು: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಸ್ಕೂಟರ್ ಗಳನ್ನು ಮೇಲ್ಸೇತುವೆಯಿಂದ ಕೆಳಗೆ ಎಸೆದವರ ವಿರುದ್ಧವೂ ಮಾದನಾಯಕನಹಳ್ಳಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಆಗಸ್ಟ್ 15ರಂದು ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.

ಘಟನೆ ಬೆನ್ನಲ್ಲೇ ವಾಹನ ಸಂಖ್ಯೆಗಳನ್ನು ಹಾಗೂ ಆ ವಾಹನಗಳ ಮಾಲೀಕರನ್ನು ಪತ್ತೆಹಚ್ಚಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಯಿತು. ವಿಚಾರಣೆಗೆ ಹಾಜರಾದ ಮಾಲೀಕರೊಬ್ಬರಿಗೆ ತಮ್ಮ ಮಗನನ್ನು ಕರೆತರುವಂತೆ ಸೂಚಿಸಲಾಯಿತು. ಬಳಿಕ ಅವರ ವಿರುದ್ಧ ಐಎಂವಿ ಕಾಯ್ದೆ ಸೆಕ್ಷನ್ 184, 187 ಮತ್ತು 189 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಯುವಕರು ಬೈಕ್ ಸ್ಟಂಟ್ ಮಾಡುವ ವೇಳೆ ಸಣ್ಣ ಅಪಘಾತ ಸಂಭವಿಸಿದೆ. ಇದರಿಂದ ಆಕ್ರೋಶಗೊಂಡ ಕೆಲವರು ಎರಡೂ ಸ್ಕೂಟರ್ ಗಳನ್ನು ಫ್ಲೈಓವರ್ ನಿಂದ 20 ಕೆಳಗಿನ ಸರ್ವಿಸ್ ರಸ್ತೆಗೆ ಎಸೆದಿದ್ದಾರೆ. ಬಳಿಕ ಭಯಭೀತರಾದ ಯುವಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ವಾಹನಗಳನ್ನು ವಶಕ್ಕ ಪಡೆದಿದ್ದರು.

ಇದೀಗ ಮಾದನಾಯಕನಹಳ್ಳಿ ಪೊಲೀಸರು ವಾಹನಗಳನ್ನು ಮೇಲ್ಸೇತುವೆಯಿಂದ ಕೆಳಗೆ ಎಸೆದಿದ್ದಕ್ಕಾಗಿ ಬಿಎನ್‌ಎಸ್‌ನ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT