ಸಂಗ್ರಹ ಚಿತ್ರ 
ರಾಜ್ಯ

ಹಬ್ಬಕ್ಕೆ ಸಾಲು-ಸಾಲು ರಜೆ: ಬೆಂಗಳೂರು-ಬೆಳಗಾವಿ, ವಿಜಯಪುರಕ್ಕೆ ವಿಶೇಷ ರೈಲು ವ್ಯವಸ್ಥೆ!

ಬುಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗಾಗಿ, ಪ್ರಯಾಣಿಕರು 139 ಗೆ ಕರೆ ಮಾಡಬಹುದು ಅಥವಾ ಐಆರ್​​ಸಿಟಿಸಿ ವೆಬ್​ಸೈಟ್​ ಮೂಲಕವೂ ಪರಿಶೀಲಿಸಿ ಬುಕಿಂಗ್ ಮಾಡಬಹದು ಎಂದು ರೈಲ್ವೆ ತಿಳಿಸಿದೆ.

ಬೆಂಗಳೂರು: ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ಬೆಳಗಾವಿ ಮತ್ತು ವಿಜಯಪುರ ಮಾರ್ಗಗಳಲ್ಲಿ ವಿಶೇಷ ರೈಲು ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06555 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್, ಸೆಪ್ಟೆಂಬರ್ 5 ರಂದು ಸಂಜೆ 7.30 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 7.15 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06556 ಸೆಪ್ಟೆಂಬರ್ 6 ರಂದು ಬೆಳಿಗ್ಗೆ 8.45 ಕ್ಕೆ ಬೆಳಗಾವಿಯಿಂದ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಯಶವಂತಪುರವನ್ನು ತಲುಪಲಿದೆ. ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಎರಡೂ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಹೊಂದಿದೆ.

ರೈಲು ಸಂಖ್ಯೆ 06557 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 6 ರಂದು ರಾತ್ರಿ 10.15 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 10.15 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06558 ಸೆಪ್ಟೆಂಬರ್ 8 ರಂದು ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 4.30 ಕ್ಕೆ ಯಶವಂತಪುರವನ್ನು ತಲುಪಲಿದೆ.

ರೈಲು ಸಂಖ್ಯೆ 06577 ಎಸ್​ಎಂವಿಟಿ ಬೆಂಗಳೂರು-ವಿಜಯಪುರ-ಎಸ್​ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 5 ಮತ್ತು 7 ರಂದು ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಮಧ್ಯಾಹ್ನ 2.05 ಕ್ಕೆ ವಿಜಯಪುರ ತಲುಪಲಿದೆ. ರೈಲು ಸಂಖ್ಯೆ 06578 ವಿಜಯಪುರದಿಂದ ಸೆಪ್ಟೆಂಬರ್ 6 ಮತ್ತು 8ರಂದು ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಬೆಂಗಳೂರು ತಲುಪಲಿದೆ.

ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟ್, ತೊರ್ನಗಲ್ಲು, ಹೊಸಪೇಟೆ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿಯಲ್ಲಿ ನಿಲುಗಡೆ ಹೊಂದಿದೆ.

ಬುಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗಾಗಿ, ಪ್ರಯಾಣಿಕರು 139 ಗೆ ಕರೆ ಮಾಡಬಹುದು ಅಥವಾ ಐಆರ್​​ಸಿಟಿಸಿ ವೆಬ್​ಸೈಟ್​ ಮೂಲಕವೂ ಪರಿಶೀಲಿಸಿ ಬುಕಿಂಗ್ ಮಾಡಬಹದು ಎಂದು ರೈಲ್ವೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT