ನಟ ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್'ಗೆ ಮನೆಯೂಟ ಭಾಗ್ಯ ಇಲ್ಲ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ

ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೆ.5ಕ್ಕೆ ಮುಂದೂಡಿದೆ.

ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಪೀಠವು, ಜೈಲು ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿತ್ತು. ಜೈಲು ಅಧಿಕಾರಿಗಳು ತಮ್ಮ ನಿರ್ಣಯವನ್ನು ನೀಡುವಂತೆ ತಿಳಿಸಿತ್ತು.

ಅಂತೆಯೇ ನಿರ್ಧಾರವನ್ನು ಹೈಕೋರ್ಟ್​ಗೆ ನೀಡಿದ್ದ ಜೈಲು ಅಧಿಕಾರಿಗಳು ಜೈಲು ಊಟ ಸಾಕೆಂದಿದ್ದರು. ಜೈಲಿನ ವೈದ್ಯಾಧಿಕಾರಿ ನೀಡಿದ್ದ ವರದಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಿದರು.

ವೈದ್ಯಾಧಿಕಾರಿಗಳು ದರ್ಶನ್​ಗೆ ಮನೆ ಊಟವನ್ನು ನಿರಾಕರಿಸಿದ್ದಾರೆ ಎಂದು ಹೈಕೋರ್ಟ್​ನಲ್ಲಿ ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಹೇಳಿದರು. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು.

ಈ ವೇಳೆ ದರ್ಶನ್‌ ಪರ ವಕೀಲೆ ಸಂಜೀವಿನಿ ನಾವದಗಿ ಅವರು ವಾದ ಮಂಡಿಸಿ, ನಮ್ಮ ಕೋರಿಕೆಯನ್ನು ತಿರಸ್ಕರಿಸಿರುವ ಆದೇಶವನ್ನು ಪರಿಶೀಲಿಸಿಲ್ಲ. ಅದನ್ನು ನೋಡಿ ಮೆರಿಟ್‌ ಮೇಲೆ ವಾದಿಸಲಾಗುವುದು. ನ್ಯಾಯಾಲಯ ಸಮಯ ನಿಗದಿಪಡಿಸಬಹುದು ಎಂದು ತಿಳಿಸಿದರು. ಇದಕ್ಕೆ ಒಪ್ಪಿದ ನ್ಯಾಯಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ 'Batwara 1947': ಸನ್ನಿ ಡಿಯೋಲ್ ಮುಸ್ಲಿಂ ಪಾತ್ರ ಜನರಿಗೆ ಇಷ್ಟವಾಗಲಿಲ್ಲವೇ! ಶಬಾನಾ ಆಜ್ಮಿ ಹೇಳಿದ್ದೇನು?

Hit And Run: ಪಾದಚಾರಿಗೂ ಜೀವಂತವಾಗಿ ರಸ್ತೆ ದಾಟುವ ಹಕ್ಕಿದೆ: ದೆಹಲಿ ಕೋರ್ಟ್

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ