ಸುಧಾ ಮೂರ್ತಿ 
ರಾಜ್ಯ

ರಕ್ಷಾ ಬಂಧನಕ್ಕೆ ಮೊಘಲ್ ರಾಜ ಹುಮಾಯೂನ್ ಕಾರಣ: ಸಂಸದೆ ಸುಧಾ ಮೂರ್ತಿ ಪೋಸ್ಟ್‌ ಚರ್ಚೆಗೆ ಗ್ರಾಸ!

ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಇದೇ ಮೊದಲ ಬಾರಿಗೆ ಟ್ರೋಲ್ ಆಗಿದ್ದಾರೆ. ರಕ್ಷಾ ಬಂಧನ ದಿನಾಚರಣೆಗೆ ಸಂದೇಶ ಕೋರಿದ ಟ್ವೀಟ್ ಇದೀಗ ಟ್ರೋಲ್‌ ಹಾಗೂ ಆಕ್ರೋಶಕ್ಕೆ ಗುರಿಯಾಗಿದೆ.

ನವದೆಹಲಿ: ದೇಶದೆಲ್ಲೆಡೆ ರಕ್ಷಾ ಬಂಧನ ಆಚರಣೆ ಜೋರಾಗಿ ನಡೆದಿದೆ. ಹೆಣ್ಣುಮಕ್ಕಳು ತಮ್ಮ ಸಹೋದರರಿಗೆ ರಾಖಿ ಕಟ್ಟಿದ್ದಾರೆ, ಈ ಹೊತ್ತಿನಲ್ಲೇ ಇನ್ಫೋಸಿಸ್‌ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರ ಸೋಷಿಯಲ್‌ ಮೀಡಿಯಾ ಪೋಸ್ಟ್‌ ಚರ್ಚೆ ಹುಟ್ಟುಹಾಕಿದೆ. ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಇದೇ ಮೊದಲ ಬಾರಿಗೆ ಟ್ರೋಲ್ ಆಗಿದ್ದಾರೆ. ರಕ್ಷಾ ಬಂಧನ ದಿನಾಚರಣೆಗೆ ಸಂದೇಶ ಕೋರಿದ ಟ್ವೀಟ್ ಇದೀಗ ಟ್ರೋಲ್‌ ಹಾಗೂ ಆಕ್ರೋಶಕ್ಕೆ ಗುರಿಯಾಗಿದೆ. ರಕ್ಷಾ ಬಂಧನ ಹಬ್ಬವನ್ನು ಮೊಘಲ್ ದೊರೆ ಹುಮಾಯುನ್ ಗೆ ಸಂಬಂಧಿಸಿದ ಘಟನೆಯೊಂದನ್ನು ಉಲ್ಲೇಖಿಸಿದ್ದಾರೆ.

16ನೇ ಶತಮಾನದಲ್ಲಿ ರಾಣಿ ಕರ್ಣವತಿ ಸಮಸ್ಯೆಯಲ್ಲಿ ಸಿಲುಕಿದ್ದಳು. ಸಾಮ್ರಾಜ್ಯದ ಮೇಲೆ ದಾಳಿಯಾಗಿತ್ತು. ಈ ವೇಳೆ ಕರ್ಣವತಿ ರಾಖಿಯೊಂದನ್ನು ಮೊಘಲ್ ದೊರೆ ಹುಮಾಯುನ್‌ಗೆ ಕಳುಹಿಸಿಕೊಟ್ಟು ಸಹೋದರನಾಗಿ ನನ್ನ ರಕ್ಷಣೆ ಮಾಡುವಂತೆ ಕೋರಿದ್ದಳು. ಹುಮಾಯೂನ್‌ಗೆ ಇದು ಏನೆಂದು ತಿಳಿಯಲಿಲ್ಲ. ಏನೆಂದು ವಿಚಾರಿಸಿದಾಗ, ಸ್ಥಳೀಯರು ‘ಇದು ಸಹೋದರನಿಗೆ ಸಹೋದರಿಯ ಕರೆ’ ಎಂದು ಹೇಳಿದರು. ಇದು ಭೂಮಿಯ ಸಂಪ್ರದಾಯವಾಗಿದೆ ಎಂದರು. ಚಕ್ರವರ್ತಿ, ನಾನು ರಾಣಿ ಕರ್ಣವತಿಗೆ ಸಹಾಯ ಮಾಡುತ್ತೇನೆ ಎಂದು ದೆಹಲಿಯಿಂದ ಹೊರಟರು. ಆದರೆ ಸಮಯಕ್ಕೆ ಅಲ್ಲಿಗೆ ತಲುಪಲು ಸಾಧ್ಯವಾಗಲಿಲ್ಲ. ಅಷ್ಟೊತ್ತಿಗಾಗಲೇ ಕರ್ಣವತಿ ನಿಧನರಾಗಿದ್ದರು. ನೀವು ತೊಂದರೆಯಲ್ಲಿದ್ದಾಗ, ಯಾರಾದರೂ ಬಂದು ನನಗೆ ಸಹಾಯ ಮಾಡಬೇಕು ಎಂಬ ಅರ್ಥವನ್ನು ಆ ದಾರ ಸೂಚಿಸುತ್ತದೆ. ಇದು ಬಹಳಷ್ಟು ಅರ್ಥಪೂರ್ಣವಾಗಿದೆ ಎಂದು ಸುಧಾಮೂರ್ತಿ ಅವರು ವಿವರಿಸಿದ್ದಾರೆ.

ಆದರೆ ಇವೆಲ್ಲದರ ಬದಲು ಸುಧಾಮೂರ್ತಿ ಹೇಳಿದ ಹುಮಾಯುನ್ ಘಟನೆ ಇದೀಗ ಆಕ್ರೋಶಕ್ಕೆ ತುತ್ತಾಗಿದೆ. ಸಧಾಮೂರ್ತಿಯ ಈ ಟ್ವೀಟ್ ಹಾಗೂ ವಿಡಿಯೋ ಸಂದೇಶ ಹಲವರ ಆಕ್ರೋಶಕ್ಕೆ ಗುರಿಯಾಗಿದೆ. ರಕ್ಷಾ ಬಂಧನ ಶ್ರೀಕೃಷ್ಣನ ಕಾಲದಲ್ಲಿ ಆರಂಭಗೊಂಡ, ಸಹೋದರಿಯರನ್ನು ರಕ್ಷಿಸಿದ ಹಲವು ಘಟನೆಗಳ ಉಲ್ಲೇಖವಿದೆ. ಶ್ರೀಕೃಷ್ಣನ ಕೈಬೆರಳು ಗಾಯಗೊಂಡಾಗ ತಕ್ಷಣವೇ ದ್ರೌಪದಿ ಸೀರೆ ಬದಿ ಹರಿದು ಶ್ರೀಕೃಷ್ಣನ ಬೆರಳಿಗೆ ಕಟ್ಟಿದ್ದರು. ಅಣ್ಣನ ಆರೋಗ್ಯದ ಕಾಳಜಿ ವಹಿಸಿದ ತಂಗಿಯ ರಕ್ಷಣೆಗೆ ಶ್ರೀಕೃಷ್ಣ ಶಪಥ ಮಾಡಿದ್ದ. ರಾಖಿ ಕಟ್ಟಿದ ದ್ರೌಪದಿಯ ರಕ್ಷಣೆಗೆ ಧಾವಿಸಿದ್ದು ಇದೇ ಶ್ರೀಕೃಷ್ಣ. ಆದರೆ ಸುಧಾಮೂರ್ತಿ ಹುಮಾಯುನ್‌ ಕಾಲದಲ್ಲಿ ರಾಖಿ ಹಬ್ಬ ಆಚರಣೆ ಆರಂಭಗೊಂಡಿತು ಎಂದು ಉಲ್ಲೇಖಿಸಿದ್ದಾರೆ. ಇದು ತಪ್ಪು ಎಂದು ಹಲವರು ಇತಿಹಾಸ ಹಾಗೂ ಪುರಾಣದ ಉಲ್ಲೇಖಗಳನ್ನು ನೀಡಿದ್ದಾರೆ. ಮೊಘಲರು ತಮ್ಮ ಉದ್ದೇಶ ಈಡೇರಿಕೆಗೆ ಒಂದೆರೆಡು ರಾಖಿ ಹಬ್ಬ ಆಚರಿಸಬಹುದು. ಆದರೆ ಅಸಂಖ್ಯಾತ ಹಿಂದೂ ಹೆಣ್ಣುಮಕ್ಕಳು ಬಲಿಯಾಗಿದ್ದಾರೆ. ದೇವಸ್ಥಾನಗಳು ಧ್ವಂಸಗೊಂಡಿದೆ. ನಮ್ಮ ಪರಪಂರೆ ಮಹಾಭಾರತ, ರಾಮಾಯಣ ಕಾಲದಿಂದಲೂ ಇದೆ. ಇದನ್ನು ದಾಳಿಕೋರರಿಗೆ ಹೋಲಿಸಬೇಡಿ, ಈ ಘಟನೆಗಳ ಉಲ್ಲೇಖಿಸುವ ಅಗತ್ಯವೂ ಭಾರತಕ್ಕಿಲ್ಲ ಎಂದು ಹಲವರು ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರದಿಂದ MGNREGA ಯೋಜನೆ 'ಬುಲ್ಡೋಜ್'; 'ಕರಾಳ ಕಾನೂನಿನ' ವಿರುದ್ಧ ಹೋರಾಡಲು ಸೋನಿಯಾ ಪ್ರತಿಜ್ಞೆ

ಬಾಗಲಕೋಟೆ: ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ!

ಮೊಟ್ಟೆ' ತಿಂದ್ರೆ ಕ್ಯಾನ್ಸರ್‌ ಬರುತ್ತಾ? ಕಡೆಗೂ ದೃಢೀಕರಣ ನೀಡಿದ FSSAI!

ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ: 'ಭೂಮಿ'ಯನ್ನು ಬಂಜೆ ಮಾಡಬಾರದು- ಸಿಎಂ ಸಿದ್ದರಾಮಯ್ಯ

ಗುಜರಾತ್‌: ಅಪ್ರಾಪ್ತ ಬಾಲಕಿ, ಪ್ರಿಯಕರನೊಂದಿಗೆ ಸೇರಿ ತಂದೆಗೆ ನಿದ್ರೆ ಮಾತ್ರೆ ನೀಡಿ, ಕೊಲೆ!

SCROLL FOR NEXT