ಸಚಿವ ದಿನೇಶ್ ಗುಂಡೂರಾವ್  
ರಾಜ್ಯ

ಝೀಕಾ ಬೆನ್ನಲ್ಲೇ ಈಗ Mpox ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸನ್ನದ್ಧ ಎಂದ ಸಚಿವ

ದೇಶದಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ, ಹೊರ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗ್ರತೆ ವಹಿಸಬೇಕು.

ಬೆಂಗಳೂರು: ಝೀಕಾ ವೈರಲ್ ಬೆನ್ನಲ್ಲೇ ರಾಜ್ಯದಲ್ಲಿ ಮಂಕಿ ಪಾಕ್ಸ್ ಆತಂಕ ಶುರುವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದ್ದಾರೆ.

ಹೊರದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾದ ಕಾರಣದಿಂದ ಆರೋಗ್ಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿ, ಮುಂಜಾಗೃತಾ ಕ್ರಮಗಳ ಕುರಿತು ಚರ್ಚೆ ನಡೆಸಿದರು.

ದೇಶದಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ, ಹೊರ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗ್ರತೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಬೇಕು. ಮಂಕಿಪಾಕ್ಸ್ ವೈರಾಣು ಗುಣಲಕ್ಷಣಗಳು ಕಂಡು ಬಂದರೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಒಂಬತ್ತು ಝೀಕಾ ಪ್ರಕರಣಗಳು ಪತ್ತೆಯಾಗಿದ್ದು, ಶಿವಮೊಗ್ಗದಲ್ಲಿ ಮೂರು ಹಾಗೂ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಮಂದಿಗೆ ಝೀಕಾ ವೈರಾಣು ಸೋಂಕು ದೃಢಪಟ್ಟಿದೆ. ಈ ಪೈಕಿ 5 ಮಹಿಳೆಯರಿಗೆ ಸೋಂಕು ತಗುಲಿದ್ದು, ಇವರ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT