ಪ್ರಥಮೇಶ್ 
ರಾಜ್ಯ

ಉಡುಪಿ: ಮೊಬೈಲ್ ಕೊಟ್ಟಿಲ್ಲ ಎಂದು ಬಾವಿಗೆ ಹಾರಿದ PUC ವಿದ್ಯಾರ್ಥಿ ಸಾವು!

ಮೊಬೈಲ್ ಕೊಡದಿದ್ದಕ್ಕೆ ಬೇಸರ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ 17 ವರ್ಷದ ಪ್ರಥಮೇಶ್ ಮೃತದೇಹ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿಯ ಬಾವಿಯಲ್ಲಿ ಪತ್ತೆಯಾಗಿದೆ.

ಉಡುಪಿ: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಮಕ್ಕಳಿಂದ ಹಿಡಿದು ಯುವ ಜನತೆ ಮೊಬೈಲ್ ಬಳಕೆಯಲ್ಲಿ ಮುಳುಗುತ್ತಿದೆ. ಇನ್ನು ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಹಲವು ಜೀವವನ್ನು ಕಳೆದುಕೊಂಡಿದ್ದಾರೆ.

ಅದೇ ರೀತಿಯ ಘಟನೆ ಇದೀಗ ಉಡುಪಿಯಲ್ಲಿ ನಡೆದಿದೆ. ಮೊಬೈಲ್ ಕೊಡದಿದ್ದಕ್ಕೆ ಬೇಸರ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ 17 ವರ್ಷದ ಪ್ರಥಮೇಶ್ ಮೃತದೇಹ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿಯ ಬಾವಿಯಲ್ಲಿ ಪತ್ತೆಯಾಗಿದೆ.

ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮೇಶ್ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಪ್ರಥಮೇಶ್ ಮನೆ ಬಿಟ್ಟು ಹೋಗಿದ್ದನು. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸ್ನೇಹಿತರು ಹುಡುಕಾಟ ನಡೆಸಿದ್ದರೂ ಪ್ರಥಮೇಶ್ ಪತ್ತೆಯಾಗಿರಲಿಲ್ಲ. ಆದರೆ ಇಂದು ಬಾವಿಯಲ್ಲಿ ಪ್ರಥಮೇಶ್ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!