ಪ್ರಥಮೇಶ್ 
ರಾಜ್ಯ

ಉಡುಪಿ: ಮೊಬೈಲ್ ಕೊಟ್ಟಿಲ್ಲ ಎಂದು ಬಾವಿಗೆ ಹಾರಿದ PUC ವಿದ್ಯಾರ್ಥಿ ಸಾವು!

ಮೊಬೈಲ್ ಕೊಡದಿದ್ದಕ್ಕೆ ಬೇಸರ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ 17 ವರ್ಷದ ಪ್ರಥಮೇಶ್ ಮೃತದೇಹ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿಯ ಬಾವಿಯಲ್ಲಿ ಪತ್ತೆಯಾಗಿದೆ.

ಉಡುಪಿ: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಮಕ್ಕಳಿಂದ ಹಿಡಿದು ಯುವ ಜನತೆ ಮೊಬೈಲ್ ಬಳಕೆಯಲ್ಲಿ ಮುಳುಗುತ್ತಿದೆ. ಇನ್ನು ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಹಲವು ಜೀವವನ್ನು ಕಳೆದುಕೊಂಡಿದ್ದಾರೆ.

ಅದೇ ರೀತಿಯ ಘಟನೆ ಇದೀಗ ಉಡುಪಿಯಲ್ಲಿ ನಡೆದಿದೆ. ಮೊಬೈಲ್ ಕೊಡದಿದ್ದಕ್ಕೆ ಬೇಸರ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ 17 ವರ್ಷದ ಪ್ರಥಮೇಶ್ ಮೃತದೇಹ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿಯ ಬಾವಿಯಲ್ಲಿ ಪತ್ತೆಯಾಗಿದೆ.

ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮೇಶ್ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಪ್ರಥಮೇಶ್ ಮನೆ ಬಿಟ್ಟು ಹೋಗಿದ್ದನು. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸ್ನೇಹಿತರು ಹುಡುಕಾಟ ನಡೆಸಿದ್ದರೂ ಪ್ರಥಮೇಶ್ ಪತ್ತೆಯಾಗಿರಲಿಲ್ಲ. ಆದರೆ ಇಂದು ಬಾವಿಯಲ್ಲಿ ಪ್ರಥಮೇಶ್ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT