ಎಚ್ ಡಿ ಕುಮಾರಸ್ವಾಮಿ 
ರಾಜ್ಯ

HDK ಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ SIT ಪತ್ರ!

2007ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ.

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಸಚಿವ ಎಚ್ ಡಿ​ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.

2007ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪವಿದೆ. ಈ ಪ್ರಕರಣ ಸಂಬಂಧ ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್​ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ.

ಅಕ್ರಮ ಗಣಿಗಾರಿಕೆ ಕುರಿತು 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್​. ಸಂತೋಷ್​ ಹೆಗ್ಡೆ ಅವರು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್​ಐಟಿ ತನಿಖೆ ನಡೆಸುತ್ತಿದೆ. ಎಚ್​ಡಿ ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್​ಐಟಿ 2023 ನವೆಂಬರ್ 21ರಂದು ರಾಜ್ಯಪಾಲ ತಾವರ್​ ಚಂದ್​ ಗೆಹ್ಲೋಟ್​ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29ರಂದು ಎಸ್​ಐಟಿಗೆ ಪತ್ರ ಬರೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT