ಬುಲೆಟ್ ಪ್ರೂಫ್ ಕಾರಿನಲ್ಲಿ ರಾಜ್ಯಪಾಲರು 
ರಾಜ್ಯ

ಗವರ್ನರ್ ವಿರುದ್ಧ ಪ್ರತಿಭಟನೆ: ರಾಜ್ಯಪಾಲರಿಗೆ ಝಡ್-ಪ್ಲಸ್ ಭದ್ರತೆ, ಬುಲೆಟ್ ಪ್ರೂಫ್ ಕಾರು

ಮಂಗಳವಾರ ಬೆಳಗ್ಗೆಯಿಂದ ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರನ್ನು ಬಳಸಲು ಆರಂಭಿಸಿದ್ದಾರೆ ಎಂದು ರಾಜಭವನ ಮೂಲಗಳು ಪಿಟಿಐಗೆ ತಿಳಿಸಿವೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ ಅನುಮತಿ ನೀಡಿದ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರ ವಿರುದ್ಧ ರಾಜ್ಯದಲ್ಲಿ ಭಾರೀ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯ ಸಾಂವಿಧಾನಿಕ ಮುಖ್ಯಸ್ಥರ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ರಾಜಭವನದ ಮೂಲಗಳು ಬುಧವಾರ ತಿಳಿಸಿವೆ.

ಮಂಗಳವಾರ ಬೆಳಗ್ಗೆಯಿಂದ ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರನ್ನು ಬಳಸಲು ಆರಂಭಿಸಿದ್ದಾರೆ ಎಂದು ರಾಜಭವನ ಮೂಲಗಳು ಪಿಟಿಐಗೆ ತಿಳಿಸಿವೆ.

"ಎಲ್ಲಾ ರಾಜ್ಯಪಾಲರು ಝಡ್-ಪ್ಲಸ್ ಭದ್ರತೆಗೆ ಅರ್ಹರಾಗಿರುತ್ತಾರೆ. ಆದರೆ ಗೆಹ್ಲೋಟ್ ಅವರು ಇಲ್ಲಿಯವರೆಗೆ ಅದನ್ನು ಬಳಸುತ್ತಿರಲಿಲ್ಲ. ಏಕೆಂದರೆ ಅವರಿಗೆ ಅದರ ಅಗತ್ಯವಿಲ್ಲ ಎಂದು ಭಾವಿಸಿದ್ದರು. ಆದರೆ ಈಗ ಅವರ ಭದ್ರತೆಯನ್ನು ಬಿಗಿಗೊಳಿಸಲಾಗಿದೆ" ಎಂದು ಮೂಲಗಳು ತಿಳಿಸಿವೆ.

ಗೆಹ್ಲೋಟ್ ಅವರಿಗೆ ಝಡ್-ಪ್ಲಸ್ ಭದ್ರತೆ ನೀಡಲಾಗುವುದು ಎಂದು ಪಿಟಿಐ ಮೂಲಗಳು ತಿಳಿಸಿವೆ.

ಸಾಮಾನ್ಯವಾಗಿ ರಾಜ್ಯಪಾಲರಿಗೆ ಬುಲೆಟ್‌ ಪ್ರೂಫ್ ಕಾರಿನಲ್ಲಿ ಓಡಾಡಲು ಅವಕಾಶವಿರುತ್ತದೆ. ಅದನ್ನು ಗುಪ್ತಚರ ಇಲಾಖೆಯಿಂದ ಯಾವಾಗ ಬೇಕಾದರೂ ತರಿಸಿಕೊಂಡು ಅವರು ಅದರಲ್ಲಿ ಓಡಾಡಬಹುದು. ಆದರೆ, ಗೆಹ್ಲೋಟ್‌ ಅವರು, ಕರ್ನಾಟಕಕ್ಕೆ ರಾಜ್ಯಪಾಲರಾಗಿ ಬಂದಾಗಿನಿಂದ ಸಾಮಾನ್ಯ ಕಾರಿನಲ್ಲೇ ಓಡಾಡುತ್ತಿದ್ದರು. ಆದರೀಗ, ಆ. 21ರಿಂದ ಬುಲೆಟ್‌ ಪೂ್‌ ಕಾರಿನಲ್ಲಿ ಓಡಾಡಲು ಆರಂಭಿಸಿದ್ದಾರೆ. ಇದು ಈಗ ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT