ಲೋಕಾಯುಕ್ತ ಕಚೇರಿ 
ರಾಜ್ಯ

ಲೋಕಾಯುಕ್ತರಿಂದ ಕೆರೆಗಳ ಪರಿಶೀಲನೆ: ಒತ್ತುವರಿ ತೆರವುಗೊಳಿಸುವಂತೆ ಆದೇಶ

ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯ ಭಾಗವಾಗಿ ಲೋಕಾಯುಕ್ತರು, ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ನಗರದ ವಿಭೂತಿಕೆರೆ ಮತ್ತು ದೊಡ್ಡನೆಕ್ಕುಂದಿ ಕೆರೆಗಳಿಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಂಗಳೂರು: ಮಹದೇವಪುರ ವಲಯದ ಕೆರೆ ಕಳಪೆ ನಿರ್ವಹಣೆ ಕುರಿತು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಮಂಗಳವಾರ ಕೆರೆ ಪರಿಶೀಲನೆ ನಡೆಸಿದ್ದು, ಒತ್ತುವರಿ ತೆರವು ಮಾಡಿ ತಿಂಗಳೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯ ಭಾಗವಾಗಿ ಲೋಕಾಯುಕ್ತರು, ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ನಗರದ ವಿಭೂತಿಕೆರೆ ಮತ್ತು ದೊಡ್ಡನೆಕ್ಕುಂದಿ ಕೆರೆಗಳಿಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಬಿಬಿಎಂಪಿ, ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪರಿಶೀಲನೆ ವೇಳೆ ವಿಭೂತಿಕೆರೆಯಲ್ಲಿ ನೀರು ಸಂಗ್ರಹವಾಗದೇ ಇರುವುದನ್ನು ಗಮನಿಸಿದ ಲೋಕಾಯುಕ್ತರು, ಆ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ವೇಳೆ ಅಧಿಕಾರಿಗಳು ಮಳೆ ಕೊರತೆಯಿಂದ ನೀರು ಸಂಗ್ರಹವಾಗಿಲ್ಲ ಎಂದು ಉತ್ತರಿಸಿದರು.

ಆದರೆ ಸ್ಥಳೀಯರು, ಕೆರೆಗೆ ನೀರು ಹರಿದುಬರುವ ರಾಜಕಾಲುವೆ ಮತ್ತು ಮಳೆ ನೀರಿನ ಕಾಲುವೆಗಳು ಮುಚ್ಚಿಹೋಗಿವೆ. ನೀರು ಬಂದರೆ ಸುತ್ತಮುತ್ತಲಿನ ಕೊಳವೆಬಾವಿಗಳಿಗೆ ನೀರು ಬರುತ್ತದೆ. ಇದರಿಂದ ಟ್ಯಾಂಕರ್ ನೀರು ವ್ಯವಹಾರ ಮಾಡುವವರಿಗೆ ನಷ್ಟವಾಗುತ್ತದೆ. ಅವರ ಪ್ರಭಾವದಿಂದ ಒತ್ತುವರಿಯನ್ನು ಹಾಗೇ ಬಿಡಲಾಗಿದೆ ಎಂದು ಲೋಕಾಯುಕ್ತರಿಗೆ ಮಾಹಿತಿ ನೀಡಿದರು.

ಈ ವೇಳೆ ಕಾಲುವೆಗಳು ಮುಚ್ಚಿಹೋಗಿರುವುದು ಮತ್ತು ಕೆರೆಯ ಅಂಗಳದಲ್ಲಿ ಕಟ್ಟಡಗಳು ನಿರ್ಮಾಣವಾಗಿರುವುದನ್ನು ಕಂಡ ಲೋಕಾಯುಕ್ತರು, ‘ಕೆರೆಯ ಜಾಗ ಎಷ್ಟು ಒತ್ತುವರಿಯಾಗಿದೆ ಎಂಬುದನ್ನು ಪತ್ತೆ ಮಾಡಲು ಭೂಮಾಪನ ನಡೆಸಿ, 20 ದಿನಗಳಲ್ಲಿ ವರದಿ ನೀಡಿ’ ಎಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.

ಕೆರೆಯ ಅಂಗಳದಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ಒಡೆದುಹಾಕಲು ತಕ್ಷಣವೇ ಕ್ರಮ ತೆಗೆದುಕೊಳ್ಳಿ. ಎಲ್ಲಾ ಒತ್ತುವರಿಯನ್ನು ಒಂದು ತಿಂಗಳ ಒಳಗೆ ತೆರವು ಮಾಡಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆ ಪ್ರದೇಶದಲ್ಲಿ ಭದ್ರತೆ ಇಲ್ಲ ಎಂದು ಸಾರ್ವಜನಿಕರು ದೂರಿದಾಗ, ಬೆಳಿಗ್ಗೆ ಮತ್ತು ಸಂಜೆ ಗಸ್ತು ಹಾಕುವಂತೆ ಪೊಲೀಸ್‌ ಅಧಿಕಾರಿಗಳಿಗೆ ಹೇಳಿದರು.

ಬಳಿಕ ಲೋಕಾಯುಕ್ತ ತಂಡ ದೊಡ್ಡನೆಕ್ಕುಂದಿ ಕೆರೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈವೇಳೆ ಸುಮಾರು 2 ಎಕರೆ 6 ಗುಂಟಾ ಜಾಗ ಒತ್ತುವರಿಯಾಗಿದೆ ಎಂದು ಸರ್ವೇಯರ್ ಮಾಹಿತಿ ನೀಡಿದರು.

ಈ ವೇಳೆ ಸ್ಥಳೀಯ ನಿವಾಸಿಗಳು, ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡು ಅಪಾರ್ಟ್‌ಮೆಂಟ್‌, ವಿಲ್ಲಾಗಳನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಮಾತನಾಡಿದ ಲೋಕಾಯುಕ್ತರು, ದೊಡ್ಡನೆಕ್ಕುಂದಿ ಕೆರೆಯ ಅಭಿವೃದ್ಧಿಗೆ ರೂ.14 ಕೋಟಿ ಬಿಡುಗಡೆಯಾಗಿದ್ದು, ಹಣವನ್ನು ಯಾವ ಕೆಲಸಗಳಿಗೆ ವೆಚ್ಚ ಮಾಡಲಾಗಿದೆ ಎಂಬುದರ ವಿವರ ಸಲ್ಲಿಸುವಂತೆ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT